ಕಂಟೇನರ್ಗೆ ಹಿಂಬದಿಯಿಂದ ಕಾರು ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು

ಕೊಪ್ಪಳ: ಕಂಟೇನರ್ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಭೀಕರವಾದ ಅಪಘಾತ ಸಂಭವಿಸಿದೆ. ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು ಈ ಅಪಘಾತದಲ್ಲಿ ಮೂವರ ಸಾವನ್ನಪ್ಪಿದ್ದಾರೆ.

ಪ್ರವೀಣ್ ಕುಮಾರ್ ಭೋಜಪ್ಪ (27), ಸುರೇಶ್ ಈರಸಂಗಪ್ಪ ಹಂಡರಗಲ್ (43) ಹಾಗೂ ಗೌರಮ್ಮ ಹನುಮಗೌಡ ಕನ್ನೂರು (60) ಮೃತರು. ಮೃತರು ಮುದ್ದೇಬಿಹಾಳ ಮೂಲದವರಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಇದನ್ನೂ ಓದಿ:ಭೀಕರ ರಸ್ತೆ ಅಪಘಾತ: ಹೊಸೂರು ಶಾಸಕನ ಪುತ್ರ ಸೇರಿ 7 ಮಂದಿ ಸಾವು

ಕಾರ್ ಡಿಕ್ಕಿ ಹೊಡೆದ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದಾರೆ. ಮೃತ ದೇಹಗಳನ್ನ ಕುಷ್ಟಗಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಕುಷ್ಟಗಿ ಪೊಲೀಸರ ಭೇಟಿ ನೀಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *