ಕೋವಿಡ್‌ ನೆಪ : ‘ಸರ್ಕಾರದಿಂದ ವೃದ್ಧಾಪ್ಯ, ವಿಧವೆ, ಅಂಗವಿಕಲ ವೇತನ ಸ್ಥಗಿತ’ – ದೇಶಪಾಂಡೆ ಆರೋಪ

ಹಾನಗಲ್‌: ಕೋವಿಡ್‌ ನೆಪ ಹೇಳಿ ವೃದ್ಧಾಪ್ಯ, ಅಂಗವಿಕಲ, ವಿಧವಾ ವೇತನಗಳನ್ನು ಸರ್ಕಾರ ನಿಲ್ಲಿಸಿದ್ದು, ಕೇವಲ ಟೊಳ್ಳು ಆಶ್ವಾಸನೆ ನೀಡುತ್ತಾ ಜನತೆಯ ದಾರಿ ತಪ್ಪಿಸುತ್ತಿದೆ ಎಂದು ಮಾಜಿ ಸಚಿವ ಆರ್‌.ವಿ.ದೇಶಪಾಂಡೆ ಕಿಡಿಕಾರಿದ್ದಾರೆ.

ಹಾನಗಲ್‌ ತಾಲೂಕಿನ ಕತ್ತರಿಕೊಪ್ಪ ಗ್ರಾಮದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಉಪ ಚುನಾವಣೆ ಹಲವಾರು ಪ್ರಶ್ನೆಗಳಿಗೆ ಉತ್ತರ ಕೊಡಬೇಕಾಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಡಬಲ್‌ ಎಂಜಿನ್‌ ಸರ್ಕಾರ ಯಾರ ಪರವಾಗಿ ಕೆಲಸ ಮಾಡುತ್ತಿದೆ? ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್‌ ಅಭ್ಯರ್ಥಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಜೆಡಿಎಸ್‌ ಮತ ಬಿಜೆಪಿಗೆ ಸಹಾಯ ಮಾಡಲಿದೆ ಎಂಬುದು ಎಲ್ಲರಿಗೂ ತಿಳಿದ ವಿಚಾರ ಎಂದು ಹೇಳಿದರು.

ಅಗತ್ಯ ವಸ್ತುಗಳು, ತೈಲ ಬೆಲೆ ಏರಿಕೆ ಮಾಡಿರುವುದೇ ಬಿಜೆಪಿ ಸಾಧನೆ. ಇದರಿಂದ ಕಾರ್ಮಿಕರಿಗೆ, ಕೂಲಿಕಾರರಿಗೆ ತೊಂದರೆ ಆಗಿದೆ. ಇವೆಲ್ಲ ಬೆಳವಣಿಗೆ ಆಡಳಿತ, ಪ್ರತಿಪಕ್ಷಗಳಿಗೆ ಗೌರವ ತರುವುದಿಲ್ಲ ಎಂದರು.

Donate Janashakthi Media

Leave a Reply

Your email address will not be published. Required fields are marked *