ಗೇರುಬೀಜ ಕಾರ್ಖಾನೆಯಲ್ಲಿ ಅಗ್ನಿ ಅವಘಢ

ಕಾರ್ಕಳ:  ಕುಕ್ಕುಂದೂರಿನ ಮಾರುತಿ ಇಂಡಸ್ಟ್ರೀಸ್ ಗೇರು ಬೀಜದ ಫ್ಯಾಕ್ಟರಿಯಲ್ಲಿ ಇಂದು ನಸುಕಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರ ಪರಿಣಾಮ ಎರಡು ಲಾರಿ ಸಹಿತ ಕಾರ್ಖಾನೆ ಸಂಪೂರ್ಣ ಭಸ್ಮವಾಗಿದೆ.

ನಸುಕಿನ ಜಾವ ಫ್ಯಾಕ್ಟರಿ ಪಕ್ಕದಲ್ಲಿ ಮಲಗಿದ್ದ ಕೆಲಸಗಾರರಿಗೆ ಬೆಂಕಿ ತಗುಲಿದ ವಿಚಾರ ಗಮನಕ್ಕೆ ಬಂದ ಕೂಡಲೇ ಮಾಲಕರಿಗೆ ಮಾಹಿತಿ ನೀಡಿ ಅಗ್ನಿ ಶಾಮಕ ದಳದವರನ್ನು ಕರೆಸಲಾಗಿತ್ತು.

ಗೇರು ಬೀಜದ ಫ್ಯಾಕ್ಟರಿ ಆಗಿರುವುದರಿಂದ  ಸಿಪ್ಪೆ ಮತ್ತು ಎಣ್ಣೆ ಹೆಚ್ಚಾಗಿರುವುದರಿಂದ ಬೆಂಕಿಯ ಕೆನ್ನಾಲಿಗೆಯಲ್ಲಿ ಫ್ಯಾಕ್ಟರಿ ಸಂಪೂರ್ಣ ಹೊತ್ತಿ ಉರಿದಿದೆ. ಸ್ಥಳಕ್ಕೆ ಆಗಮಿಸಿದ ಮೂರು ಅಗ್ನಿ ಶಾಮಕ ದಳದವರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ.

ಈ ಅಗ್ನಿ ಅವಗಡಕ್ಕೆ ಸುಮಾರು 1.5 ಕೋಟಿ ರೂ ನಷ್ಟವಾಗಿದೆ ಎಂದು ಮಾಲಕ ಪ್ರಕಾಶ್ ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *