ಜನವರಿ 1 ರಿಂದ ಶಾಲಾ ಕಾಲೇಜು ಪುನರಾರಂಭ : ಸಿಎಂ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ನ ಭೀತಿಯಿಂದಾಗಿ ಸ್ಥಗಿತಗೊಂಡಿದ್ದ ಶಾಲೆಗಳು ಪುನರಾರಂಭವಾಗುವುದು ಯಾವಗ ಎಂಬ ಚರ್ಚೆಗಳು ತೀವ್ರ ಕೂತಹಲ ಮೂಡಿಸಿತ್ತು. ಇಂತಹ ಕೂತುಹಲಗಳಿಗೆ ಸಿಎಂ ಯಡಿಯೂರಪ್ಪನವರು ತೆರೆ ಎಳೆದಿದ್ದಾರೆ

ಇಂದು ಬಿಎಸ್ ಸಿಎಂ ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜ.1ರಿಂದ 10 ಮತ್ತು 12ನೇ ತರಗತಿ ಪುನರಾರಂಭಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಅವರು 2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭಿಸಲಾಗುತ್ತದೆ. 15 ದಿನಗಳ ಕಾಲ ಪರಿಸ್ಥಿತಿಯನ್ನು ಅವಲೋಕಿಸಿ ಉಳಿದ ತರಗತಿ ಪ್ರಾರಂಭಿಸುವ ಕುರಿತು ನಿರ್ಧಾನ ಕೈಗೊಳ್ಳಲಾಗುವುದು ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *