ಜೆಡಿಎಸ್ ಮೈತ್ರಿಯೊಂದಿಗೆ ಕುಶಾಲ ನಗರದ ಪಟ್ಟಣ ಪಂಚಾಯಿತಿ ಬಿಜೆಪಿ ಅಧಿಕಾರಕ್ಕೆ

ಕೊಡಗು : ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಕುಶಾಲನಗರ ಪಟ್ಟಣ ಪಂಚಾಯಿತಿಯಲ್ಲಿ ಜೆಡಿಎಸ್ ಮೈತ್ರಿಯೊಂದಿಗೆ ಬಿಜೆಪಿ ಅಧಿಕಾರಕ್ಕೇರಿದೆ.

ಬಿಜೆಪಿಗೆ ಅಧ್ಯಕ್ಷ ಸ್ಥಾನ, ಜೆಡಿಎಸ್ ಗೆ ಉಪಾಧ್ಯಕ್ಷ ಸ್ಥಾನ ಪಡೆದುಕೊಂಡಿದ್ದು, ಜೆಡಿಎಸ್ ನ ಮೂವರು ಸದಸ್ಯರ ಬೇಷರತ್ ಬೆಂಬಲದೊಂದಿಗೆ ಬಿಜೆಪಿ ಕುಶಾಲನಗರ ಪಟ್ಟಣ ಪಂಚಾಯತ್ ಅನ್ನು ತನ್ನ ತೆಕ್ಕೆಗೆ ತೆಗದುಕೊಂಡಿದೆ.

ಬಿಜೆಪಿಯ ಜಯವಧ೯ನ್ ( ಕೇಶವ್) ಅಧ್ಯಕ್ಷರಾಗಿ ಹಾಗೂ ಜೆಡಿಎಸ್ ನ ಸುರಯ್ಯ ಭಾನು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬಿಜೆಪಿಯೊಂದಿಗೆ ಕೈಜೋಡಿಸಿದ ಜೆಡಿಎಸ್ ಸದಸ್ಯರ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ಅನೈತಿಕ ರಾಜಕಾರಣ ಮಾಡುತ್ತಿದೆ ಎಂದು ಕುಶಾಲನಗರ ಪಟ್ಟಣ ಪಂಚಾಯಿತಿ ಎದುರೇ ಪ್ರತಿಭಟನೆ ಮಾಡುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *