ಧೂದ್ ಸಾಗರ್ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು: ರೈಲ್ವೆ ಸಿಬ್ಬಂದಿ ಪಾರು

ಕಲ್ಲಿದ್ದಲು ತುಂಬಿಕೊಂಡು ಸಾಗುತ್ತಿದ್ದ ಗೂಡ್ಸ್ ರೈಲು ಹಳಿತಪ್ಪಿದ ಘಟನೆ ಗೋವಾ-ಬೆಳಗಾವಿ-ಕಾರವಾರ ಗಡಿ ಭಾಗದಲ್ಲಿ ಸಂಭವಿಸಿದೆ.

ಲೋಂಧ ವಾಸ್ಕೋ ರೈಲು ಮಾರ್ಗದ ದೂದ್ ಸಾಗರ್‌ನಿಂದ ಸೋನಾಲಿಂ ನಡುವಿನ ಸುರಂಗ ಸಂಖ್ಯೆ 15ರ ಸಮೀಪ ಈ ಘಟನೆ ಶುಕ್ರವಾರ ಬೆಳಿಗ್ಗೆ 9.30ರ ಸುಮಾರಿಗೆ ಸಂಭವಿಸಿದ್ದು, ಚಾಲಕ ಸೇರಿದಂತೆ ರೈಲು ಸಿಬ್ಬಂದಿ ಪಾರಾಗಿದ್ದಾರೆ.

ವಾಸ್ಕೋದಿಂದ ಹೊಸಪೇಟೆಯಲ್ಲಿ ಜಿಂದಾಲ್ ಕಂಪನಿಗೆ ಗೂಡ್ಸ್‌ ರೈಲಿನಲ್ಲಿ ಕಲ್ಲಿದ್ದಲು ಸಾಗಿಸಲಾಗುತ್ತಿತ್ತು. ಒಂದು ಕಾರ್ಗೋ ಕೋಚ್ ಮತ್ತು 11 ಬೋಗಿಗಳು ಹಳಿ ತಪ್ಪಿದೆ. ರೈಲು ಹಳಿ ಮುರಿದು ಬಿದ್ದಿದ್ದು ದುರಸ್ತಿ ಕಾರ್ಯ ಆರಂಭವಾಗಿದೆ.

ಮಾರ್ಗದ ರೈಲು ಸಂಖ್ಯೆ 17309 ಯಶವಂತಪುರ ದಿಂದ ವಾಸ್ಕೋಡಿ ಹಾಗೂ 17310 ವಾಸ್ಕೋಡಿಯಿಂದ ಯಶವಂತಪುರಕ್ಕೆ ಹೋಗುವ ಎರಡು ರೈಲುಗಳು ರದ್ದು ಮಾಡಲಾಗಿದೆ. ಇಂದು ಸಂಜೆ ತೆರಳುವ ಗೋವಾ ಎಕ್ಸ್‌ಪ್ರೆಸ್ ರೈಲನ್ನು ಇತರೇ ಮಾರ್ಗದಲ್ಲಿ ತಿರುಗಿಸಲಾಗುವುದು ಎಂದು ರೈಲ್ವೆ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *