ನವದೆಹಲಿ: ಕ್ರೈಸ್ತ ಸಮುದಾಯಕ್ಕೆ ರಕ್ಷಣೆ ನೀಡಬೇಕು ದೇಶದಾದ್ಯಂತ ಕಠಿಣವಾಗಿ ಕಾನೂನು ಜಾರಿ ಮಾಡಬೇಕು, ಎಂದು ಕೋರಿ ‘ಭಾರತದ ಕ್ಯಾಥೋಲಿಕ್ ಬಿಷಪ್ಗಳ ಸಭೆ’ಯ (ಸಿಬಿಸಿಐ) ಅಧ್ಯಕ್ಷ ಆರ್ಚ್ ಬಿಷಪ್ ಆ್ಯಂಡ್ರ್ಯೂಸ್ ತಾಯತ್ತ್ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ದೇಶದ ವಿವಿಧ ಭಾಗಗಳಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿಯುಂಟು ಮಾಡುತ್ತಿರುವ ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ ಅವರು ಮನವಿ ಮಾಡಿದ್ದಾರೆ. ಅವರು ಮಾಡಿರುವ ವಿಡಿಯೊ ಮನವಿಯನ್ನು ಸಿಬಿಸಿಐ ಬಿಡುಗಡೆ ಮಾಡಿದ್ದು, ‘ಕ್ರೈಸ್ತರ ಮೇಲಿನ ದಾಳಿಯು ಏರಿಕೆಯಾಗುತ್ತಿರುವುದು ಮನಸ್ಸಿಗೆ ಘಾಸಿಯನ್ನುಂಟು ಮಾಡಿದೆ’ ಎಂದು ಹೇಳಿದ್ದಾರೆ. ಅಲ್ಲದೆ ಇಂತಹ ಘಟನೆಗಳು ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುವ ಭಾರತದ ಸಂವಿಧಾನದ ಆತ್ಮಕ್ಕೆ ತೀವ್ರ ಗಾಯವನ್ನುಂಟು ಮಾಡುತ್ತದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ಕೇರಳ | ಕರಡು ಮತದಾರರ ಪಟ್ಟಿಯಿಂದ 24 ಲಕ್ಷ ಮತದಾರರ ಹೆಸರು ರದ್ದು
‘ಶಾಂತಿಯುತವಾಗಿ ಕರೊಲ್ ಹಾಡುತ್ತಿದ್ದವರ ಮೇಲೆ, ಚರ್ಚ್ನಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವವರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಇದು ತಮ್ಮ ನಂಬಿಕೆಯನ್ನು ಶಾಂತಿಯುತವಾಗಿ ಆಚರಿಸಲು ಬಯಸುವ, ಕಾನೂನು ಪಾಲಿಸುವ ನಾಗರಿಕರಲ್ಲಿ ಭಯ ಮತ್ತು ಯಾತನೆಯನ್ನು ಉಂಟುಮಾಡುತ್ತದೆ’ ಎಂದು ಅವರು ಹೇಳಿದ್ದಾರೆ.
ಈ ದ್ವೇಷ ಮತ್ತು ಹಿಂಸಾಚಾರದ ಕೃತ್ಯಗಳನ್ನು ನಾನು ಖಂಡಿಸುತ್ತೇನೆ. ನಮ್ಮ ಸಮಾಜವನ್ನು ವಿಭಜಿಸಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸಂಬಂಧಪಟ್ಟವರನ್ನು ಆಗ್ರಹಿಸುತ್ತೇನೆ, ‘ಇಂತಹ ಘಟನೆಗಳು ನಮ್ಮ ಸಂವಿಧಾನದ ಚೈತನ್ಯವನ್ನು ತೀವ್ರವಾಗಿ ಘಾಸಿಗೊಳಿಸುತ್ತವೆ ಎಂದು ಅವರು ಹೇಳಿದ್ದಾರೆ.
‘ಕಟ್ಟುನಿಟ್ಟಾಗಿ ಕಾನೂನು ಜಾರಿಯನ್ನು ಖಚಿತಪಡಿಸಿಕೊಳ್ಳಲು, ದೇಶದಾದ್ಯಂತ ಕ್ರೈಸ್ತ ಸಮುದಾಯಗಳಿಗೆ ರಕ್ಷಣೆ ನೀಡಲು ನಾನು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರರಿಗೆ ವಿನಮ್ರವಾಗಿ ಮನವಿ ಮಾಡುತ್ತೇನೆ. ಇದರಿಂದಾಗಿ ಸಾಮರಸ್ಯ ಮತ್ತು ಪರಸ್ಪರ ಗೌರವದ ವಾತಾವರಣದಲ್ಲಿ ಕ್ರಿಸ್ಮಸ್ ಆಚರಿಸಬಹುದು’ ಎಂದು ಹೇಳಿದ್ದಾರೆ.
ಇದನ್ನೂ ನೋಡಿ : ‘ಮರ್ಯಾದೆಗೇಡು ಹತ್ಯೆ’ ಮರ್ಯಾದೆ ಉಳಿಸಿಕೊಳ್ಳಲಿ ಸರ್ಕಾರ!? ಕೆ.ಎಸ್.ವಿಮಲಾ, ಗುರುರಾಜ ದೇಸಾಯಿ ಮಾತುಕತೆ Janashakthi
https://www.youtube.com/watch?v=rRGqt5Z1uoI
