ಪ್ರಯಾಣಿಕನ ಪ್ರಾಣ ಉಳಿಸಿದ ರೈಲ್ವೇ ಸಿಬ್ಬಂದಿಯ ಸಮಯಪ್ರಜ್ಞೆ; ವೀಡಿಯೋ ವೈರಲ್

ತಮಿಳುನಾಡು :ಇಬ್ಬರು ಸಿಬ್ಬಂದಿಯ ಸಮಯಪ್ರಜ್ಞೆಯಿಂದ ರೈಲು ಪ್ರಯಾಣಿಕನ ಜೀವ ಉಳಿದಿದ್ದು, ವಿಡಿಯೋ ವೈರಲ್ ಆಗಿದೆ.

ಈ ಘಟನೆಯು ತಮಿಳುನಾಡಿನ ಕೊಯಮತ್ತೋರಿನಲ್ಲಿ ನಡೆದಿದ್ದು, ಚಲಿಸುತ್ತಿರುವ ರೈಲಿನಿಂದ ಇಳಿಯಲು ಹೋಗಿ ಪ್ಲಾಟ್ ಫಾರ್ಮ್ ನಿಂದ ಕೆಳಗೆ ಬಿದ್ದ ವ್ಯಕ್ತಿಯನ್ನು ಇಬ್ಬರು ಸಿಆರ್ ಪಿಎಫ್ ಸಿಬ್ಬಂದಿಗಳು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆರ್ಪಿಎಫ್ ಇಂಡಿಯಾ ಟ್ವಿಟರ್ನಲ್ಲಿ ಹಂಚಿಕೊಂಡಿರುವ ಈ ವಿಡಿಯೋ ಸಾಕಷ್ಟು ಗಮನ ಸೆಳೆದಿದೆ ಅಲ್ಲದೆ ಇಬ್ಬರು ಯೋಧರ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಘಟನೆಯ ದೃಶ್ಯ ಪ್ಲಾಟ್ಫಾರ್ಮ್ನ ಸಿಸಿಟಿವಿ ಯಲ್ಲಿ ಸೆರೆಯಾಗಿದ್ದು ವ್ಯಕ್ತಿ ರೈಲು ನಿಲ್ಲುವ ಮೊದಲೇ ಇಳಿಯಲು ಹೋಗಿ ಎಡವಿ ರೈಲು ಕಂಪಾರ್ಟ್ಮೆಂಟ್ ಮತ್ತು ಪ್ಲಾಟ್ಫಾರ್ಮ್ ನಡುವೆ ಸಿಲುಕಿಕೊಂಡಿದ್ದು ಕೂಡಲೇ ಅಲ್ಲಿದ್ದ ಆರ್ಪಿಎಫ್ ಸಹಾಯಕ ಸಬ್-ಇನ್ಸ್ಪೆಕ್ಟರ್ ಅರುಣ್ಜಿತ್ ಮತ್ತು ಲೇಡಿ ಹೆಡ್ ಕಾನ್ಸ್ಟೆಬಲ್ ಪಿಪಿ ಮಿನಿ ಕೂಡಲೇ ಕಾರ್ಯಪ್ರವೃತ್ತರಾಗಿ ವ್ಯಕ್ತಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕ್ಲಿಪ್ ಅನೇಕ ವೀಕ್ಷಣೆಗಳು ಮತ್ತು ಪ್ರತಿಕ್ರಿಯೆಗಳನ್ನು ಗಳಿಸಿದೆ. ಜನರು ಆರ್ಪಿಎಫ್ ಸಿಬ್ಬಂದಿಯ ಧೈರ್ಯವನ್ನು ಶ್ಲಾಘಿಸಿದರು ಮತ್ತು ತ್ವರಿತವಾಗಿ ಕಾರ್ಯ ನಿರ್ವಹಿಸಿದ್ದಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಿದರು.

Donate Janashakthi Media

Leave a Reply

Your email address will not be published. Required fields are marked *