ಮಾಜಿ ಸಿಎಂ ಎಸ್‌ ಎಂ ಕೃಷ್ಣ ಅನಾರೋಗ್ಯ;ಶನಿವಾರ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ

ಬೆಂಗಳೂರುಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಎಸ್.ಎಂ. ಕೃಷ್ಣ ಅವರು ಜ್ವರ ಹಾಗೂ ತೀವ್ರ ಉಸಿರಾಟದ ಸಮಸ್ಯೆಯ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರು  ಮೊದಲು ವೈದೇಹಿ ಆಸೊತ್ರೆಯಲ್ಲಿ ಪಡೆಯುತ್ತಿದ್ದು, ಶನಿವಾರ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಶ್ವಾಸಕೋಶ ತಜ್ಞರಾದ ಡಾ. ಸತ್ಯನಾರಾಯಣ ಮೈಸೂರು  ಮತ್ತು ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.

ಅವರಿಗೆ ಕೃತಕ ಉಸಿರಾಟದ ಸಂಪರ್ಕ ಕಲ್ಪಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ. ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್‌ ಶಾಸಕ ಡಾ. ಎಚ್‌. ಡಿ  ರಂಗನಾಥ್‌ ಆಸ್ಪತ್ರೆಯಲ್ಲಿ ಜೊತೆಗಿದ್ದಾರೆ. ತೀವ್ರಾ ನಿಗಾ ಗಟಕದಲ್ಲಿ ಕೃಷ್ಣ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *