ರಾಜ್ಯದಲ್ಲಿ ಮುಂದುವರೆದ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ 15 ಜಿಲ್ಲೆಗಳಲ್ಲಿ ಇನ್ನೂ 3 ದಿನಗಳ ಕಾಲ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿತ್ತಾ ಮಳೆಯ ಆರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಚಿತ್ತ ಮಳೆಯನ್ನುಕುರುಡು ಚಿತ್ತ ಎಂದು ಹಿಂದಿನಿಂದಲ್ಲೂ ಕರೆಯುತ್ತಾರೆ. ಯಾವಾಗಬೇಕಾದರೂ, ಎಷ್ಟು ಬೇಕಾದರೂ ಸುರಿಯುವ ಈ ಮಳೆಗೆ ಕುರುಡು ಚಿತ್ತ ಎಂದು ಕರೆಯುವುದು ವಾಡಿಕೆ.

ಉತ್ತರ ಕರ್ನಾಟಕದಲ್ಲಿ ಸುರಿದ ಮಳೆಯಿಂದಾಗಿ ಜನರ ಜೀವನ ತತ್ತರಿಸಿ ಹೋಗಿದ್ದು. ಚಿತ್ತ ಮಳೆ ಅಬ್ಬರ ಕೊಂಚ ಕಡಿಮೆಯಾಗಿದೆ.

ಕರಾವಳಿ, ದಕ್ಷಿಣ ಕನ್ನಡದಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ,ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

Donate Janashakthi Media

Leave a Reply

Your email address will not be published. Required fields are marked *