ವೀರನಹೊಸಹಳ್ಳಿಯಲ್ಲಿ ಅಧಿಕೃತ ಬೀಳ್ಕೊಡುಗೆ; ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ

ಮೈಸೂರು: ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿ ಇಂದು ಅಭಿಮನ್ಯು ನೇತೃತ್ವದ 9 ಗಜಗಳ ಪಡೆಗೆ ಮೈಸೂರಿನತ್ತ ಹೆಜ್ಜೆ ಹಾಕಿವೆ.

ಮೈಸೂರು ಅರಮನೆ ಪುರೋಹಿತರು ತುಲಾ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಹಾಗೂ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು.

ಮೊದಲ ಹಂತದಲ್ಲಿ ಒಟ್ಟು ಒಂಭತ್ತು ಆನೆಗಳು ಗಜಪಯಣದ ಮೂಲಕ ಮೈಸೂರಿಗೆ ತೆರಳುತ್ತಿದ್ದು, ವಿಶ್ವ ವಿಖ್ಯಾತ 414 ನೇ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲಿವೆ.

ದಸರಾದಲ್ಲಿ ಒಟ್ಟು 14 ಆನೆಗಳು ಭಾಗಿ:ಈ ಬಾರಿ ನಾಡ ಹಬ್ಬ ದಸರಾದಲ್ಲಿ ಒಟ್ಟು 14 ಆನೆಗಳು ಭಾಗವಹಿಸಲಿವೆ. ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಹಾಗೂ 2ನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ.

ಅಲ್ಲದೆ ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಆಯ್ಕೆ ಮಾಡಲಾಗಿದ್ದು, ಅಗತ್ಯವಿದ್ದರೆ ಮೀಸಲು ಆನೆಗಳನ್ನ ಬಳಸಿಕೊಳ್ಳಲು ಇಲಾಖೆ ತೀರ್ಮಾನಿಸಿದೆ.ಆಗಸ್ಟ್‌ 23 ರಂದು ಈ 9 ಆನೆಗಳನ್ನು ಅರಮನೆಗೆ ಬರಮಾಡಿಕೊಳ್ಳಲಾಗುವುದು. ಆಗಸ್ಟ್ 21 ರಿಂದ 23ರ ವರೆಗೆ ಅಂದ್ರೆ 2 ದಿನಗಳ ಕಾಲ 9 ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ವಾಸ್ತವ್ಯ ಹೊಡಲಿವೆ.

ಇದನ್ನೂ ಓದಿ : ಕಲ್ಯಾಣ ಕರ್ನಾಟಕದಲ್ಲಿ 371 (ಜೆ) ವಿಧಿ ಜಾರಿಗೆ 10 ವರ್ಷ: ರಾಜ್ಯ ಸರ್ಕಾರದಿಂದ ಸಂಭ್ರಮಾಚರಣೆ

ನಾಡಹಬ್ಬಕ್ಕೆ ಆಗಮಿಸುವ ಆನೆಗಳ ವಿವರ

ಅಭಿಮನ್ಯು (58), ಭೀಮ (24), ಗೋಪಿ (41), ಧನಂಜಯ (43), ಕಂಜನ್‌ (25), ರೋಹಿಣಿ (22), ಲಕ್ಷ್ಮೀ (53), ವರಲಕ್ಷ್ಮಿ (67), ಏಕಲವ್ಯ (38) ಆನೆಗಳು ಮೊದಲ ಗಜಪಯಣದಲ್ಲಿ ಮೈಸೂರಿಗೆ ಬರಲಿವೆ.

Donate Janashakthi Media

Leave a Reply

Your email address will not be published. Required fields are marked *