ಹುರುಳಿಲ್ಲದ ಬಿಜೆಪಿ ಪ್ರತಿಭಟನೆ ಮಾಡಲಿ ಬಿಡಿ: ಡಿಕೆ ಶಿವಕುಮಾರ್

ಬಿಜೆಪಿಯವರ ಪ್ರತಿಭಟನೆಯಲ್ಲಿ ಹುರುಳಿಲ್ಲ. ಹಾಗಾಗಿ ಅವರು ಪ್ರತಿಭಟನೆ ಮಾಡಲಿ. ನಮ್ಮದೇನೂ ಅಭ್ಯಂತರವಿಲ್ಲ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿರುವುದಕ್ಕೆ ನಾವು ಮೈಸೂರಿನಲ್ಲಿ ತಕ್ಕ ಉತ್ತರ ಕೊಟ್ಟಿದ್ದೇವೆ ಎಂದರು.

ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಆಲಮಟ್ಟಿ ಜಲಾಶಯ ಭರ್ತಿಯಾಗಿದ್ದು, ನಾನು ಮತ್ತು ಸಿಎಂ ಇಬ್ಬರೂ ಹೋಗಿ ಬಾಗಿನ ಅರ್ಪಿಸಲಿದ್ದೇವೆ. ತುಂಗಾಭದ್ರ ಜಲಾಶಯ ಕೂಡ ದುರಸ್ಥಿ ನಂತರ ಮತ್ತೆ ಭರ್ತಿಯಾಗುತ್ತಿದೆ. ತುಂಗಾಭದ್ರ ಜಲಾಶಯದಲ್ಲಿ ಒಳಹರಿವು ಹೆಚ್ಚಾಗಿದ್ದು, 80 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ. ಅದು ಭರ್ತಿಯಾದ ಕೂಡಲೇ ಬಾಗಿನ ಅರ್ಪಿಸುತ್ತೇವೆ ಎಂದು ಅವರು ಹೇಳಿದರು.

Donate Janashakthi Media

Leave a Reply

Your email address will not be published. Required fields are marked *