ಗದಗ: ಭಾರತೀಯ ಪುರಾತತ್ವ ಇಲಾಖೆ ಅಧಿಕಾರಿ ರಮೇಶ್ ಮೂಲಿಮನಿ ಬಾಯ್ತಪ್ಪಿನಿಂದ ಲಕ್ಕುಂಡಿಯಲ್ಲಿ ಸಿಕ್ಕಿರುವುದು ನಿಧಿ ಅಲ್ಲ ಅಂತ ಹೇಳಿಕೆ ನೀಡಿದರು’ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು. ಗದಗ
ಸೋಮವಾರ ಇಲ್ಲಿ ರಮೇಶ್ ಮೂಲಿಮನಿ ಅವರ ಜತೆಗೂಡಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಿಕ್ಕಿದ್ದು 100 ವರ್ಷಕ್ಕೂ ಹಳೆಯ ಆಭರಣಗಳು. ಈ ಬಗ್ಗೆ ನಡೆಯುತ್ತಿರುವ ಅಧ್ಯಯನ ಪೂರ್ಣಗೊಂಡ ನಂತರವಷ್ಟೇ ಅದು ಯಾವ ಕಾಲದ್ದು, ಎಷ್ಟು ಹಳೆಯದ್ದು ಎಂಬ ಬಗ್ಗೆ ಮಾಹಿತಿ ಸಿಗಲಿದೆ’ ಎಂದರು. ಗದಗ
ಇದನ್ನೂ ಓದಿ : ಕೇಂದ್ರ ಸರ್ಕಾರದ ಆರ್ಥಿಕ ದಿಗ್ಬಂಧನ ಖಂಡಿಸಿ ಕೇರಳ ಸಿಎಂ ನೇತೃತ್ವದಲ್ಲಿ ಸತ್ಯಾಗ್ರಹ ಹೋರಾಟ
‘ರಿತ್ತಿ ಕುಟುಂಬಸ್ಥರು ಚಿನ್ನವನ್ನು ಜಿಲ್ಲಾಡಳಿತಕ್ಕೆ ನೀಡಿ, ಪ್ರಾಮಾಣಿಕತೆ ತೋರಿದ್ದಾರೆ. ಸರ್ಕಾರದ ಜತೆಗೆ ಚರ್ಚಿಸಿ, ಕುಟುಂಬಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು’ ಎಂದರು. ‘ರಾಜ್ಯ ಪುರಾತತ್ವ ಇಲಾಖೆಯ ತಜ್ಞೆ ಸ್ಮಿತಾ ರೆಡ್ಡಿ ಮಂಗಳವಾರ ಸ್ಥಳಕ್ಕೆ ಭೇಟಿ ನೀಡುವರು. ಅವರ ತನಿಖೆಯಿಂದ ಇನ್ನಷ್ಟು ಮಾಹಿತಿ ಲಭ್ಯವಾಗಲಿವೆ’ ಎಂದು ತಿಳಿಸಿದರು.
ಆ ಸ್ಥಳದಲ್ಲಿ ಮತ್ತಿನ್ನೇನು ಸಿಗುವುದಿಲ್ಲ ಎಂದು ತಜ್ಞರು ದೃಡೀಕರಿಸಿದ ನಂತರ ಮನೆ ನಿರ್ಮಾಣಕ್ಕೆ ಸೂಚಿಸಲಾಗುವುದು. ‘ಮನೆ ನಿರ್ಮಾಣಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ. ಎರಡು ದಿನಗಳಲ್ಲಿ ಉತ್ತರ ಸಿಗಲಿದೆ’ ಎಂದರು.
ಸಿಕ್ಕ ಆಭರಣಗಳು 100 ವರ್ಷ ಮೀರಿದವು ಎಂದು ಅಂದಾಜಿಸಲಾಗಿದೆ. ರಮೇಶ್ ಮೂಲಿಮನಿ ಅವರು, ‘ಚಿನ್ನ ಸಿಕ್ಕಿದೆ ಎಂದು ತಿಳಿದಂತೆ ಸ್ಥಳಕ್ಕೆ ಭೇಟಿ ನೀಡಿದ್ದೆ. ಕರ್ನಾಟಕ ನಿಕ್ಷೇಪ ನಿಧಿಯಡಿ ಭೂಮಿಯೊಳಗೆ ₹10ಕ್ಕಿಂತ ಹೆಚ್ಚಿನ ಮೌಲ್ಯದ ಏನೇ ಸಿಕ್ಕರೂ 1962ಕಾಯ್ದೆ ಪ್ರಕಾರ ಸರ್ಕಾರಕ್ಕೆ ಸೇರಿದ್ದಾಗಿದೆ’ ಎಂದರು.
‘ನಿಧಿ ಸಿಕ್ಕ ಜಾಗ ಅಪಶಕುನ. ಅಲ್ಲಿ ದೇವಸ್ಥಾನ ನಿರ್ಮಿಸಲಿ. ಲಕ್ಷ್ಮಿ ದೇವಸ್ಥಾನದ ಹಿಂಬದಿ ಚಿನ್ನದ ಆಭರಣಗಳಿದ್ದ ತಂಬಿಗೆ ಸಿಕ್ಕಿದ್ದು ಅಲ್ಲಿ ಸರ್ಪದ ಕಾವಲಿದೆ. ನಿಧಿ ಸಿಕ್ಕ ಜಾಗ ನಮಗೆ ಬೇಡ. ದೇವರಿಗೆ ಇರಲಿ. ನಮಗೆ ಬೇರೆಡೆ ಮನೆ ಕಟ್ಟಿಸಿಕೊಡಿ’ ಎಂದು ಗಂಗಗವ್ವ ರಿತ್ತಿ ಕುಟುಂಬದವರು ಬೇಡಿಕೆ ಇಟ್ಟರು. ‘ನಿಧಿ ಸಿಕ್ಕ ಜಾಗ ಬೆಂಕಿ ಇದ್ದಂತೆ. ಬೆಂಕಿ ಕಟ್ಟಿಕೊಂಡು ಹೋದರೆ ಸೆರಗು ಸುಡುವುದೇ. ಮಗ ಇದ್ದಾನೆ. ಅವನಿಗೆ ಯಾವುದಾದರೂ ಸರ್ಕಾರಿ ಕೆಲಸ ಕೊಡಿಸಬೇಕು’ ಎಂದು ಆಗ್ರಹಿಸಿದ್ದಾರೆ. ‘ಬಾಲಕನಿಗೆ ಪಿಯುಸಿವರೆಗೆ ಉಚಿತ ಶಿಕ್ಷಣದ ವ್ಯವಸ್ಥೆ ಮಾಡಲಾಗುವುದು’ ಎಂದು ಬಿ.ಎಚ್.ಪಾಟೀಲ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಸಿದ್ದು ಪಾಟೀಲ ಭರವಸೆ ನೀಡಿದ್ದಾರೆ.
ಇದನ್ನೂ ನೋಡಿ : ಒಳ್ಳೆಯ ದಿನಗಳು ಏನಾದವು? ಆರ್ಥಿಕ ಸುಧಾರಣೆ ಭಾರತದ್ದೋ.., ಬಿಜೆಪಿಯದ್ದೋ!?? Janashakthi Media
