12 ವರ್ಷದ ಬಾಲಕಿ ಕತ್ತು ಕುಯ್ದು ಬರ್ಬರವಾಗಿ ಹತ್ಯೆ

  • ಜಿಲ್ಲೆಯ ಪೊಲೀಸರ ನಿದ್ದೆಗೆಡಿಸುತ್ತಿರುವ ಅಪರಾಧಗಳು

 ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿಅಪರಾಧ ಪ್ರಕರಣಗಳ ಸಂಖ್ಯೆ ದಿನೇದಿನೇಹೆಚ್ಚಾಗ್ತಿದೆ. ಕೊಲೆ, ಸುಲಿಗೆ, ದರೋಡೆಯಂತಹ ಪ್ರಕರಣಗಳ ನಡೀತಾ ಇದೆ. ಇದರ ಜೊತೆಗೆ ಕೊಲೆ ಪ್ರಕರಣಗಳಂತೂ ಜಿಲ್ಲೆಯ ಪೊಲೀಸರ ನಿದ್ದೆ ಗೆಡಿಸುತ್ತಿದ್ದು, ವಾರಕ್ಕೊಂದು ಎರಡು ಕೊಲೆಗಳಾಗುತ್ತಿವೆ. ಇಂದು ಕೂಡ ಸಕ್ಕರೆನಾಡಿನಲ್ಲಿ ಬಾಲಕಿಯೊಬ್ಬಳನ್ನು ದುಷ್ಕರ್ಮಿಗಳು  ಬರ್ಬರವಾಗಿ ಹತ್ಯೆ ಮಾಡಿದ್ದು, ಊರಿನ  ಜನರನ್ನು ಬೆಚ್ಚಿ ಬೀಳಿಸಿದೆ.

ಸಕ್ಕರೆ ನಾಡಿನಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಮಿತಿ ಮೀರಿದೆ. ಇಂದು ಮಂಡ್ಯದ ಮದ್ದೂರು ತಾಲೂಕಿನ ಹುರುಗಲವಾಡಿಯಲ್ಲಿ  ಕಬ್ಬು ಕಡಿಯಲು ಬಂದಿದ್ದ ಬಾಲಕಿಯನ್ನು ಕಬ್ಬಿನ ಗದ್ದೆಯಲ್ಲಿಯೇ ದುಷ್ಕರ್ಮಿಗಳು ಕತ್ತು ಕುಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬಳ್ಳಾರಿ‌ ಮೂಲದ 12 ವರ್ಷದ ಬಾಲಕಿಯನ್ನು‌ ಭೀಕರವಾಗಿ ಹತ್ಯೆ ಮಾಡಿದ್ದು, ಆ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿ, ಒಪ್ಪದಿದ್ದಾಗ ಆಕೆಯ ಕತ್ತು ಕುಯ್ದು ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತ ವಾಗಿದೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇನ್ನು  ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಘಟನಾ ಸ್ಥಳಕ್ಕೆ ಮದ್ದೂರಿನ ಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀ ಲನೆ ನಡೆಸಿದ್ದಾರೆ. ಅಲ್ಲದೇ ಮೃತ ಬಾಲಕಿಯ ಪೋಷಕರಿಂದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಬೆರಳಚ್ಚು ತಜ್ಞರು ಸೇರಿದಂತೆ ಶ್ವಾನದಳವನ್ನು ಕರೆಸಿ ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ. ಇನ್ನು ಘಟನೆ ಸಂಬಂಧ ಸ್ಥಳೀಯ ಗ್ರಾಮದ ಯುವಕನೊಬ್ಬನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದು, ಶೀಘ್ರವೇ ಈ  ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸುವ ವಿಶ್ವಾಸದಲ್ಲಿದ್ದಾರೆ ಮಂಡ್ಯ ಜಿಲ್ಲೆಯ ಪೊಲೀಸರು.

ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಈ ರೀತಿಯ ಚಿತ್ರ ವಿಚಿತ್ರ ಬರ್ಬರ ಹತ್ಯೆ ಪ್ರಕರಣಗಳು ಇದೀಗ ಜಿಲ್ಲೆಯ ಜನರನ್ನು ಒಂದೆಡೆ ಬೆಚ್ವಿ ಬೀಳಿಸಿದೆ. ಜೊತೆಗೆ ‌ಪೊಲೀಸ್ ಇಲಾಖೆಯನ್ನು ಕೂಡ ಹೈರಾಣಾಗಿಸಿದೆ.

Donate Janashakthi Media

Leave a Reply

Your email address will not be published. Required fields are marked *