ಜೂನ್ 14 ರ ವರೆಗೆ ಲಾಕ್‌ಡೌನ್ ವಿಸ್ತರಣೆ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ 19 ಸೋಂಕು ನಿಯಂತ್ರಿಸುವ ಕಾರಣದಿಂದ ಈ ಹಿಂದೆ ಜಾರಿಮಾಡಿದ್ದ ಲಾಕ್ ಡೌನ್ ನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 14ರವರೆಗೆ ಲಾಕ್ ಡೌನ್ ಮುಂದುವರಿಸಲಾಗುವುದು ಎಂದು ಹೇಳಿದರು. ಇದೇ ವೇಳೆ ಎರಡನೇ ಕೋವಿಡ್ ಪ್ಯಾಕೇಜ್ ಘೋಷಣೆ ಮಾಡಿದರು. ಈ ಬಾರಿ ಸಿಎಂ 500 ಕೋಟಿ ರೂ ಪ್ಯಾಕೇಜ್ ಘೋಷಣೆ ಮಾಡಿದರು.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 5 ಕ್ಕಿಂತ ಕಡಿಮೆಯಾದರೆ, ಒಂದು ವಾರದಲ್ಲಿ ಎಲ್ಲವನ್ನೂ ತೆರವುಗೊಳಿಸಲು ಸಿದ್ದರಿದ್ದೇವೆ. ಗ್ರಾಮೀಣ ಪ್ರದೇಶದಲ್ಲಿ ಇನ್ನೂ ಜಾಸ್ತಿ ಇದೆ. ಜನರು ಸಹಕಾರ ನೀಡಬೇಕು. ಒಂದು ವಾರದ ನಂತರ ಶೇ 5 ಕ್ಕಿಂತ ಕಡಿಮೆ ಬಂದರೆ ಎಲ್ಲ ರೀತಿಯ ವಿನಾಯಿತಿ ನೀಡಲಾಗುವುದು ಎಂದರು.

ಸದ್ಯ ಜಾರಿಯಲ್ಲಿರುವ ಲಾಕ್ ಡೌನ್ ನಿಯಮಗಳು ಮುಂದುವರಿಯಲಿದೆ.  ಜೂನ್ 14 ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದರು.

Donate Janashakthi Media

Leave a Reply

Your email address will not be published. Required fields are marked *