ಅನ್ಯ ಜಾತಿ ಯುವಕನೊಂದಿಗೆ ಪ್ರೇಮ: ತಂದೆಯಿಂದಲೇ ಮಗಳ ಕೊಲೆ

ಮೈಸೂರು: ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಾಳೆ ಎಂಬ ಕಾರಣಕ್ಕೆ ತಂದೆಯೇ ಮಗಳನ್ನು ಹತ್ಯೆಗೈದಿರುವ ಘಟನೆಯು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ.  ಮರ್ಯಾದಾ ಹತ್ಯೆ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಈ ಘಟನೆ ದುರಂತ ಘಟನೆಯೇ ಸಾಕ್ಷಿಯಾಗಿದೆ.

ನಂತರ ಪೊಲೀಸ್ ಠಾಣೆಗೆ ತೆರಳಿ ತಪ್ಪೊಪ್ಪಿಕೊಂಡು ಶರಣಾಗಿದ್ದಾನೆ. ಆರೋಪಿ ಪಿರಿಯಾಪಟ್ಟಣದ ಮಹದೇಶ್ವರ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿರುವ ಗೊಲ್ಲರ ಬೀದಿಯ ನಿವಾಸಿ ಜಯರಾಂ ತನ್ನ ಪುತ್ರಿ ಗಾಯಿತ್ರಿ (19) ಎಂಬಾಕೆಯನ್ನು ಹತ್ಯೆ ಮಾಡಿದ್ದಾನೆ. ಗಾಯತ್ರಿ ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿರುವ ವಿಚಾರ ಮನೆಯಲ್ಲಿ ಗೊತ್ತಾಗಿತ್ತು. ಇದಕ್ಕೆ ಮೆಯವರಿಂದ ವಿರೋಧ ವ್ಯಕ್ತವಾಗಿತ್ತು.

ಇದನ್ನು ಓದಿ: ಮಹಿಳಾ ಲೋಕದೃಷ್ಟಿಯನ್ನು ಒಟ್ಟು ಸಮಾಜದ ಲೋಕದೃಷ್ಟಿಯಾಗಿಸಬೇಕು

ಗಾಯತ್ರಿಯು ರಾಘವೇಂದ್ರ ಎಂಬ ಬೇರೆ ಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದಳು. ತಾನು ಆತನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಳು. ಈ ವಿಷಯವಾಗಿ ಮನೆಯಲ್ಲಿ ಜೋರಾಗಿ ರಾದ್ದಾಂತವೇ ನಡೆದಿತ್ತು. ಮಗಳ ಮನಸ್ಸನ್ನು ಬದಲಾಯಿಸಲು ತಂದೆ ಜಯರಾಂ ಪ್ರಯತ್ನಿಸಿದ್ದರೂ, ಸಫಲವಾಗಲಿಲ್ಲ.

ಇಂದು ಮಧ್ಯಾಹ್ನ 12.30ಕ್ಕೆ ಸುಮಾರಿಗೆ ಜಮೀನಿನಲ್ಲಿ ಜಯರಾಂ ಉಳುಮೆ ಮಾಡುತ್ತಿದ್ದ ಸಂದರ್ಭದಲ್ಲಿ ಮಗಳು ಗಾಯತ್ರಿ ಊಟ ತೆಗೆದುಕೊಂಡು ಹೋಗಿದ್ದಳು. ಊಟದ ಸಮಯದಲ್ಲಿ ಮತ್ತೆ ಮಗಳೊಂದಿಗೆ ಮಾತು ಶುರುಮಾಡಿದ ಜಯರಾಂ ನೀನು ಪ್ರೀತಿಸುತ್ತಿರುವ ಯುವಕ ನಮ್ಮ ಜಾತಿಯವನಲ್ಲ, ಅವನನ್ನು ಬಿಟ್ಟು ಬಿಡು ಎಂದಿದ್ದಾನೆ.

ಇದನ್ನು ಓದಿ: ನನ್ನ ಆಯ್ಕೆ ನನ್ನ ಹಕ್ಕು , ಅನ್ಯರಿಗಿಲ್ಲಿ ಅವಕಾಶವಿಲ್ಲ, ಭಿನ್ನರಾಗ ಬೇಕಿಲ್ಲ

ಆಗ ಗಾಯತ್ರಿ ನಾನು ಮದುವೆಯಾಗುವುದಾದರೆ ಅವನನ್ನೇ. ಈ ವಿಚಾರದಲ್ಲಿ ನಾನು ಯಾರ ಮಾತನ್ನೂ ಕೇಳುವುದಿಲ್ಲ ಎಂದಿದ್ದಾಳೆ. ಇದರಿಂದ ಕೋಪಗೊಂಡ ಜಯರಾಂ ತನ್ನ ಬಳಿಯಿದ್ದ ಮಚ್ಚನ್ನು ಆಕೆಯತ್ತ ಬೀಸಿದ್ದಾನೆ. ಈ ವೇಳೆ ಆಕೆ ಕೈಯನ್ನು ಅಡ್ಡ ಮಾಡಿದ್ದು ಮೊದಲ ಏಟು ಕೈಗೆ ಬಿದ್ದಿದೆ.

ಪುನಃ ಮತ್ತೆ ಮಚ್ಚಿನಿಂದ ಮಗಳ ಕುತ್ತಿಗೆ ಭಾಗಕ್ಕೆ ಬೀಸಿದ್ದಾನೆ. ಪರಿಣಾಮ ಗಾಯತ್ರಿ ರಕ್ತದ ಮಡುವಿನಲ್ಲಿ ಬಿದ್ದು ಪ್ರಾಣ ಬಿಟ್ಟಿದ್ದಾಳೆ. ಮಗಳನ್ನು ಕೊಂದ ಬಳಿಕ ಜಯರಾಂ ನೇರವಾಗಿ ಪಿರಿಯಾಪಟ್ಟಣ ಪೊಲೀಸ್ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆಯೇ ಘಟನೆ ನಡೆದ ಸ್ಥಳಕ್ಕೆ ಎಸ್‌ ಪಿ ಚೇತನ್, ಡಿ ವೈ ಎಸ್‌ ಪಿ ರವಿಪ್ರಸಾದ್, ಇನ್ಸ್ ಪೆಕ್ಟರ್ ಜಗದೀಶ್, ಬಿ. ಆರ್. ಪ್ರದೀಪ್, ಪಿಎಸ್ಐ ಸದಾಶಿವತಿಪರೆಡ್ಡಿ, ಪುಟ್ಟರಾಜು ಭೇಟಿ ನೀಡಿ ಸ್ಥಳ ಮಹಜರು ನಡೆಸಿದರು.

Donate Janashakthi Media

Leave a Reply

Your email address will not be published. Required fields are marked *