200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಸುಖೇಶ್ ಚಂದ್ರಶೇಖರ್ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: 200 ಕೋಟಿ ರೂಪಾಯಿ ಮೊತ್ತದಷ್ಟು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೆ ಒಳಗಾಗಿರುವ ಸುಕೇಶ್ ಚಂದ್ರಶೇಖರ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮಾರ್ಚ್‌ 31ರವರೆಗೆ ದೆಹಲಿಯ ಪಟಿಯಾಲ ಹೌಸ್‌ ನ್ಯಾಯಾಲಯ ವಿಸ್ತರಿಸಿದೆ.

ಈ ಮೊದಲು ಫೆಬ್ರುವರಿ 24ರಂದು ನಡೆದ ವಿಚಾರಣೆ ವೇಳೆ ದೆಹಲಿ ನ್ಯಾಯಾಲಯ ಸುಕೇಶ್ ಚಂದ್ರಶೇಖರ್‌ ರನ್ನು ಮೂರು ದಿನಗಳವರೆಗೆ ಜಾರಿ ನಿರ್ದೇಶನಾಲಯದ(ಇ.ಡಿ) ವಶಕ್ಕೆ ನೀಡಿ, ತನಿಖೆಗೆ ನಿರ್ದೇಶಿಸಿತು. ಇತ್ತೀಚೆಗೆ ಸುಲಿಗೆ ಮತ್ತು ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣದಡಿ ಬಂಧಿಸಲಾಗಿತ್ತು.

ಇದನ್ನು ಓದಿ: ₹200 ಕೋಟಿ ಸುಲಿಗೆ ಪ್ರಕರಣ; ಜಾಕ್ವೆಲಿನ್‌ ಫರ್ನಾಂಡೀಸ್‌ ಏಕೆ ಬಂಧಿಸಿಲ್ಲ? ಇಡಿಗೆ ದೆಹಲಿ ನ್ಯಾಯಾಲಯ ತರಾಟೆ

ಇಂದು ಮುಂಜಾನೆ ಸುಖೇಶ್‌ ಚಂದ್ರಶೇಖರ್‌ ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರು ಪಕ್ಷಪಾತ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರಕರಣವನ್ನು ಬೇರೆ ನ್ಯಾಯಾಧೀಶರಿಗೆ ವರ್ಗಾಯಿಸುವಂತೆ ಮನವಿ ಮಾಡಿದರು. ಈ ಬಗ್ಗೆ ನ್ಯಾಯಾಲಯ ಸುಖೇಶ್‌ ಚಂದ್ರಶೇಖರ್‌ ಮನವಿ ತಿರಸ್ಕರಿಸಿದೆ. ಅಲ್ಲದೆ, ʻಆರೋಪಿಗೆ ನ್ಯಾಯಮೂರ್ತಿಗಳ ಬಗ್ಗೆ ಪ್ರತಿಕ್ರಿಯಿಸುವ ಹಕ್ಕು ಇಲ್ಲʼ ಎಂದು ನ್ಯಾಯಾಲಯ ಸೂಚನೆ ನೀಡಿದೆ.

ರಿಲಿಗೇರ್ ಎಂಟರ್‌ಪ್ರೈಸಸ್‌ನ ಮಾಜಿ ಪ್ರವರ್ತಕ ಮಲ್ವಿಂದರ್ ಸಿಂಗ್ ಅವರ ಪತ್ನಿ ಜಪ್ನಾ ಸಿಂಗ್ ಅವರಿಗೆ ಆರೋಪಿ ಸುಕೇಶ್‌ ಚಂದ್ರಶೇಖರ್‌ ಹಿರಿಯ ಸರ್ಕಾರಿ ಅಧಿಕಾರಿಯಂತೆ ನಟಿಸಿ ಅವರಿಂದ 3.5 ಕೋಟಿ ರೂಪಾಯಿ ವಂಚಿಸಿದ್ದ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಜಾರಿ ಪ್ರಕರಣದ ಮಾಹಿತಿ ವರದಿಯಡಿಯಲ್ಲಿ (ಇಸಿಐಆರ್) ಸುಖೇಶ್‌ ಚಂದ್ರಶೇಖರ್‌ ರನ್ನು ಬಂಧಿಸಲಾಗಿದೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *