ಅಹಮದಾಬಾದ್: ಕಳೆದ ವಾರ ಜೂನ್ 12ರಂದು ಗುಜರಾತ್ನ ಅಹಮದಾಬಾದ್ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 270 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವೈದ್ಯಕೀಯ ಕಾಲೇಜಿನ ಹಾಸ್ಟೆಲ್ಗೆ ವಿಮಾನ ಡಿಕ್ಕಿ ಹೊಡೆದ ಪರಿಣಾಮ ವಿಮಾನದಲ್ಲಿದ್ದ 241 ಮಂದಿ ಹಾಗೂ ಹಾಸ್ಟೆಲ್ನಲ್ಲಿದ್ದ ವಿದ್ಯಾರ್ಥಿಗಳು ಸೇರಿ 270 ಮಂದಿ ಪ್ರಾಣ ಕಳೆದುಕೊಂಡಿದ್ದರು.
ಇದನ್ನೂ ಓದಿ: ಜಿಲ್ಲಾಧಿಕಾರಿಗಳ ವರ್ಗಾವಣೆ
ಇದೀಗ ಸಿವಿಲ್ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ. ರಾಕೇಶ್ ಜೋಶಿ ಮಾತನಾಡಿ, ಡಿಎನ್ಎ ಮಾದರಿಗಳ ಮೂಲಕ 211 ಜನರ ಗುರುತು ಪತ್ತೆ ಮಾಡಲಾಗಿದೆ. 189 ಶವಗಳನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಒಂದು ನಿಮಿಷವೂ ವ್ಯರ್ಥವಾಗದೆ ನಾವು ಕೆಲಸ ಮಾಡುತ್ತಿದ್ದೇವೆ. ಸಂಬಂಧಿಕರ ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.
ಇದನ್ನೂ ನೋಡಿ: ಅಭಿಮಾನಿಗಳ ಉನ್ಮಾದ, ಸರ್ಕಾರದ ಅತ್ಯುತ್ಸಾಹ ಮತ್ತು ಮಾರುಕಟ್ಟೆಯ ದಾಹ Janashakthi Media
