ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಂಡ ವಿಧಿಸಿದ ಸವರ್ಣಿಯರ ವಿರುದ್ಧ ದೂರು ಸಲ್ಲಿಕೆ

ಬೆಂಗಳೂರು: ಕೊಪ್ಪಳ ಜಿಲ್ಲೆ ಮಿಯಾಪುರ ಗ್ರಾಮದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಚನ್ನದಾಸರ ಸಮಾಜದ ಎರಡು ವರ್ಷದ ಮಗು  ದೇವಸ್ಥಾನ ಪ್ರವೇಶಿಸಿದ್ದಕ್ಕೆ ಮಗುವಿನ ಕುಟುಂಬಕ್ಕೆ 25 ಸಾವಿರ ರೂಪಾಯಿ ದಂಡ ವಿಧಿಸಿ ಅಮಾನವೀಯ ಕೃತ್ಯವೆಸಗಿರುವವರ ವಿರುದ್ಧ ದಲಿತ ಮುಖಂಡ ಹಾಗೂ ಹೈ ಕೋರ್ಟ್ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರು, ಕರ್ನಾಟಕ ನಾಗರಿಕ ಹಕ್ಕು ಮತ್ತು ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾ ನಿರ್ದೇಶಕರಾದ ಡಾ.ಪಿ.ರವೀಂದ್ರನಾಥ್, ಐಪಿಎಸ್. ರವರಿಗೆ ರಾಜ್ಯ ದೂರು ನೀಡಿದ್ದಾರೆ.

ದೂರು ಸ್ವೀಕರಿಸಿದ ಡಿಜಿಪಿರವರು ಮಗುವಿನ ಕುಟುಂಬದವರು ದೂರು ನೀಡಲು ಮುಂದಾಗದೇ ಇರುವುದರಿಂದ ಸಮಾಜ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿ ಅವರ ಮುಖಾಂತರ ಪ್ರಕರಣ ದಾಖಲಾಯಿಸಿದ್ದು ಅಗತ್ಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ : ದೇಗುಲ ಪ್ರವೇಶಿಸಿದ ದಲಿತ ವ್ಯಕ್ತಿಗೆ ದಂಡ : ಪಶ್ಚಾತಾಪಕ್ಕೆ 5 ಲಕ್ಷ ದಂಡ ಕಟ್ಟಲು ಆಜ್ಞಾಪಿಸಿದ್ದ ಗ್ರಾಮಸ್ಥರು

ರಾಜ್ಯದಲ್ಲಿ ಯಾವುದೇ ನಗರ, ಗ್ರಾಮಗಳಲ್ಲಿ ದಲಿತ ಸಮುದಾಯದವರಿಗೆ ದೇವಸ್ಥಾನ ಪ್ರವೇಶಕ್ಕೆ ಅಡ್ಡಿಪಡಿಸುವವರು, ದಲಿತ ಸಮುದಾಯದವರಿಗೆ ಹೋಟೆಲ್ ಗಳಲ್ಲಿ ಪ್ರತ್ಯೇಕವಾಗಿ ಕೂಡುವುದಕ್ಕೆ, ಪ್ರತ್ಯೇಕ ತಟ್ಟೆ ಲೋಟಗಳಲ್ಲಿ ತಿಂಡಿ ಪದಾರ್ಥಗಳನ್ನ ನೀಡುವವರ, ಚೌರ ಮಾಡಲು ನೀರಾಕರಿಸಿ ಅಸ್ಪೃಶ್ಯತೆ ಆಚರಣೆಗಳನ್ನ ಮಾಡುತ್ತಿದ್ದರೆ ಅಂಥವರ ವಿವರಗಳನ್ನು ಲಿಖಿತ ದೂರು ಮೂಲಕ ನಮ್ಮ ಗಮನಕ್ಕೆ ತಂದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *