ಚಾಮರಾಜನಗರ| 3 ಬೈಕುಗಳು ಬೆಂಕಿಗೆ ಆಹುತಿ; ಸುಟ್ಟು ಕರಕಲು

ಚಾಮರಾಜನಗರ: ಮಹದೇಶ್ವರಬೆಟ್ಟದಲ್ಲಿ ಜೂನ್‌ 23 ಸೋಮವಾರ ಮುಂಜಾನೆ ಸುಮಾರು 4 ಗಂಟೆಯ ವೇಳೆಗೆ ಮೂರು ಬೈಕುಗಳು ಬೆಂಕಿಗೆ ಆಹುತಿಯಾಗಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.

ರಾಜ್ಯದ ವಿವಿಧ ಭಾಗಗಳಿಂದ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟಕ್ಕೆ ಬಂದ ಭಕ್ತರು, ಶ್ರೀ ಕ್ಷೇತ್ರದ ಸಂಕಮ್ಮ ನಿಲದ ಬಳಿ ಬೈಕುಗಳನ್ನು ನಿಲ್ಲಿಸಿ ರಾತ್ರಿ ವಾಸ್ತವ್ಯ ಹೂಡಿದ್ದರು.

ಇದನ್ನೂ ಓದಿ: ರಾಯಚೂರು| ₹936 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ

ಆದರೆ ರಾತ್ರೋರಾತ್ರಿ ಮೂರು ಬೈಕುಗಳು ಬೆಂಕಿಗೆ ಆಹುತಿಯಾಗಿರುವುದನ್ನು ಸ್ಥಳೀಯರು ಗಮನಿಸಿದ್ದು, ಬೆಂಕಿಯನ್ನು ನಂದಿಸಲು ಮುಂದಾಗಿದ್ದರೂ ಕೂಡ ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ನೋಡಿ: ಭೂಸ್ವಾಧೀನ ವಿರೋಧಿಸಿ ‘ಸಂಯುಕ್ತ ಹೋರಾಟ’ದಿಂದ ‘ದೇವನಹಳ್ಳಿ ಚಲೋJanashakthi Media

Donate Janashakthi Media

Leave a Reply

Your email address will not be published. Required fields are marked *