ವಿವಾದಾತ್ಮಕ 3 ಹೊಸ ಕ್ರಿಮಿನಲ್ ಕಾನೂನು ಮಸೂದೆಗಳಿಗೆ ರಾಷ್ಟ್ರಪತಿಯಿಂದ ಅಂಕಿತ!

ನವದೆಹಲಿ: ಮೂರು ವಿವಾದಾತ್ಮಕ ಕ್ರಿಮಿನಲ್ ಕಾನೂನು ಮಸೂದೆಗಳಾದ ಭಾರತೀಯ ನ್ಯಾಯ (ಎರಡನೇ) ಸಂಹಿತಾ, ಭಾರತೀಯ ನಾಗರಿಕ್ ಸುರಕ್ಷಾ (ಎರಡನೇ) ಸಂಹಿತಾ ಮತ್ತು ಭಾರತೀಯ ಸಾಕ್ಷಿ (ಎರಡನೇ) ಸಂಹಿತಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಅಂಕಿತ ಹಾಕಿದ್ದಾರೆ. ಮಸೂದೆಗಳು ಡಿಸೆಂಬರ್ 20 ರಂದು ಲೋಕಸಭೆ ಮತ್ತು ಡಿಸೆಂಬರ್ 21 ರಂದು ರಾಜ್ಯಸಭೆಯಿಂದ ಅಂಗೀಕರಿಸಲ್ಪಟ್ಟಿದ್ದವು, ಇದೀಗ ಅದು ಈಗ ಕಾನೂನುಗಳಾಗಿ ಮಾರ್ಪಟ್ಟಿವೆ.

ಈ ಕಾಯಿದೆಗಳು ಜಾರಿಗೆ ಬರುವ ದಿನಾಂಕಗಳನ್ನು ಗೃಹ ಸಚಿವಾಲಯವು ತಿಳಿಸುತ್ತದೆ. ಉಭಯ ಸದನಗಳಿಂದ ಹಲವು ಸಂಸದರನ್ನು ಅಮಾನತುಗೊಳಿಸಿದ ನಂತರ ಈ ಮಸೂದೆಗಳನ್ನು ಅಂಗೀಕರಿಸಲಾಗಿದೆ ಎಂಬುದು ಗಮನಿಸಬೇಕಾದ ಸಂಗತಿಯಾಗಿದೆ. ಭಾರತೀಯ ನ್ಯಾಯ (ಎರಡನೇ) ಸಂಹಿತೆಯು ಈ ಹಿಂದೆ ಇದ್ದ ಭಾರತೀಯ ದಂಡ ಸಂಹಿತೆಗೆ ಬದಲಾಗಿ ಪರಿಚಯಿಸಲಾಗಿದೆ. ಭಾರತೀಯ ನಾಗರಿಕ್ ಸುರಕ್ಷಾ (ಎರಡನೇ) ಸಂಹಿತೆ ಈ ಹಿಂದೆ ಇದ್ದ ಕ್ರಿಮಿನಲ್ ಪ್ರೊಸೀಜರ್ ಕೋಡ್-(CrPC)ಗೆ ಬದಲಾಗಿ ಮತ್ತು ಮತ್ತು ಭಾರತೀಯ ಸಾಕ್ಷಿ (ಎರಡನೇ) ಸಂಹಿತೆಯು ಭಾರತೀಯ ಸಾಕ್ಷ್ಯ ಕಾಯಿದೆಗೆ ಬದಲಾಗಿ ಪರಿಚಯಿಸಲಾಗಿದೆ.

ಇದನ್ನೂ ಓದಿ: ಅಯೋಧ್ಯೆ | ಡಿಸೆಂಬರ್ 30ರಂದು ರೋಡ್ ಶೋ ನಡೆಸಲಿರುವ ಪ್ರಧಾನಿ ಮೋದಿ

ಹೊಸ ಕಾನೂನು ಪೊಲೀಸ್ ಬಲದ ಮಿತಿಮೀರಿದ ಬಳಕೆಗೆ ಕಾರಣವಾಗಬಹುದು ಮತ್ತು ಮಾನವ ಹಕ್ಕುಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂಬ ತೀವ್ರ ಕಳವಳದ ನಡುವೆ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಸೂದೆಗಳನ್ನು ಚರ್ಚಿಸುವಾಗ, ಹೊಸ ಮಸೂದೆಗಳ ಮೂಲಕ “ನಮ್ಮ ವಸಾಹತುಶಾಹಿ ಗತಕಾಲದ ಸಂಕೋಲೆಗಳು ಮತ್ತು ನಮ್ಮ ಗುಲಾಮಗಿರಿಯ ಎಲ್ಲಾ ಚಿಹ್ನೆಗಳನ್ನು” ನಿರ್ಮೂಲನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ವಸಾಹತುಶಾಹಿ ಯುಗದ ಕಾನೂನುಗಳನ್ನು ಬದಲಿಸುವ ಮೂಲಕ ಹೊಸ ಮಸೂದೆಗಳನ್ನು ಪ್ರಾಯೋಗಿಕವಾಗಿ ಜಾರಿಗೆ ತಂದಿದ್ದಕ್ಕೆ ನನಗೆ ಹೆಮ್ಮೆ ಇದೆ ಎಂದು ಅವರು ಹೇಳಿದ್ದರು. “ಹೊಸ ಮಸೂದೆ ನಮ್ಮ ಸಾಂವಿಧಾನಿಕ ತತ್ವಗಳಿಗೆ ಅನುಗುಣವಾಗಿದ್ದು, ಮೊದಲ ಬಾರಿಗೆ ಭಯೋತ್ಪಾದನೆಯನ್ನು ವ್ಯಾಖ್ಯಾನಿಸಲಾಗಿದೆ. ಆದ್ದರಿಂದ ಯಾರೂ ಲೋಪದೋಷಗಳನ್ನು ಬಳಸಿ ತಪ್ಪಿಸುವಂತಿಲ್ಲ” ಎಂದು ಹೇಳಿದ್ದರು. ಕ್ರಿಮಿನಲ್

ಭಾರತೀಯ ನ್ಯಾಯ (ಎರಡನೇ) ಸಂಹಿತಾ ಪ್ರಸ್ತುತ 358 ವಿಭಾಗಗಳನ್ನು ಹೊಂದಿದ್ದು; ಭಾರತೀಯ ನಾಗರಿಕ್ ಸುರಕ್ಷಾ (ದ್ವಿತೀಯ) ಸಂಹಿತಾ 531 ವಿಭಾಗಗಳನ್ನು ಹೊಂದಿದೆ ಮತ್ತು ಭಾರತೀಯ ಸಾಕ್ಷಿ (ಎರಡನೇ) ಸಂಹಿತಾ 170 ವಿಭಾಗಗಳನ್ನು ಹೊಂದಿದೆ. ಮಸೂದೆಗಳನ್ನು ಮೊದಲ ಬಾರಿಗೆ ಆಗಸ್ಟ್ 11 ರಂದು ಸಂಸತ್ತಿನಲ್ಲಿ ಪರಿಚಯಿಸಲಾಗಿತ್ತು.

ವಿಡಿಯೊ ನೋಡಿ: ಕಲ್ಲಡ್ಕ ಪ್ರಭಾಕರ್‌ ಭಟ್‌ನದ್ದು ಕೊಳಕು ಮನಸ್ಸು, ಭಯೋತ್ಪಾದಕ ಮನಸ್ಥಿತಿ – ಹೋರಾಟಗಾರರ ಆಕ್ರೋಶ Janashakthi Media

Donate Janashakthi Media

Leave a Reply

Your email address will not be published. Required fields are marked *