ಗ್ಯಾಂಗ್ಟಕ್: ಉತ್ತರ ಸಿಕ್ಕಿಂನ ಛತೆನ್ನಲ್ಲಿ ಜೂನ್ 1 ಭಾನುವಾರದಂದು ಸಂಭವಿಸಿದ ಭೂಕುಸಿತದಲ್ಲಿ ಸಿಲುಕಿದ್ದ 34 ಜನರನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಕ್ಕಿಂ
ಎರಡು MI-17 V5 ಹೆಲಿಕಾಪ್ಟರ್ಗಳು 34 ಜನರನ್ನು ಹೊತ್ತುಕೊಂಡು ಪಕ್ಯೋಂಗ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದು ರಕ್ಷಣಾ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತದದಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಎಸ್ಎಸ್ಎಲ್ಸಿ ಫಲಿತಾಂಶ ಕುಸಿತ: ಶೈಕ್ಷಣಿಕ ಸುಧಾರಣೆ ನಡೆಸಲು ಶಿಕ್ಷಣ ಇಲಾಖೆ ಮುಂದು
ಸೇನಾ ಶಿಬಿರದ ಬಳಿ ಭೂಕುಸಿತ ಸಂಭವಿಸಿದ ಮಾಹಿತಿ ಬಂದ ತಕ್ಷಣ 23 ಎನ್ಡಿಆರ್ಎಫ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದರು. ಘಟನೆಯಲ್ಲಿ ಮೂವರು ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ.
ಮೃತ ಸಿಬ್ಬಂದಿಯ ಶವಗಳನ್ನು ಹೊರತೆಗೆಯಲಾಗಿದ್ದು, ಇತರ ನಾಲ್ವರು ಸೈನಿಕರನ್ನು ರಕ್ಷಿಸಲಾಗಿದೆ, ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
‘ಮೃತಪಟ್ಟ ಯೋಧರನ್ನು ಲಖ್ವಿಂದರ್ ಸಿಂಗ್, ಮನೀಷ್ ಠಾಕೂರ್ ಮತ್ತು ಅಭಿಷೇಕ್ ಲಖಾಡ ಎಂದು ಗುರುತಿಸಲಾಗಿದೆ.
ಇದನ್ನೂ ನೋಡಿ: ಕಾನೂನು ಅರಿವು | ಕೌಟುಂಬಿಕ ಹಿಂಸಾಚಾರದಿಂದ ಮಹಿಳೆ ತನ್ನನ್ನು ರಕ್ಷಿಸಿಕೊಳ್ಳುವುದು ಹೇಗೆ? ದೂರು ದಾಖಲಿಸುವುದು ಹೇಗೆ?