ಕೊರೊನಾ ಮಾರ್ಗಸೂಚಿ ಕುರಿತು ಮಹತ್ವದ ಸಭೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮತ್ತೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸುವ ಕುರಿತು ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ : ಲಾಕ್ಡೌನ್, ಸೆಮಿ‌ಲಾಕ್ಡೌನ್ ಪ್ರಸ್ತಾಪ ಸರಕಾರದ ಮುಂದೆ ಇಲ್ಲ

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಿಸುವ ಸಲುವಾಗಿ ಈಜುಕೋಳ, ಪಾರ್ಕ್ , ಜಿಮ್ ಗಳಿಗೆ ಎರಡು ವಾರ ಸಾರ್ವಜನಿಕರ ನಿರ್ಬಂಧ ಹೇರುವುದು. ಶಾಲಾ ಕಾಲೇಜು ತರಗತಿ ನಡೆಸುವ ಬಗ್ಗೆ ಮರು ಚಿಂತನೆ, ಸಭೆ ಸಮಾರಂಭಗಳಿಗೆ ಪ್ರವೇಶ ಮಿತಿ, ದೇವಸ್ಥಾನ, ಮಾರುಕಟ್ಟೆಗಳಲ್ಲಿ ವೈಯಕ್ತಿಕ ಅಂತರ ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ನಿರ್ಧಾರವಾಗುವ ಸಾಧ್ಯತೆ ಇದೆ.

ಜನಶಕ್ತಿ ಮೀಡಿಯಾ ವಾಟ್ಸಪ್ ಸೇರಿಕೊಳ್ಳಲು ಈ ಲಿಂಕ್ ಕ್ಲಿಕ್ ಮಾಡಿ

ಇನ್ನು ರಾಜ್ಯದಲ್ಲಿ ಭಾನುವಾರ 1,715 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 13,493 ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿಗೆ ಈವರೆಗೆ 12,434 ಮಂದಿ ಮರಣ ಹೊಂದಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *