ರಸ್ತೆ ಅಪಘಾತ ರೈತ ನಾಯಕರ ಸಾವು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಇಬ್ಬರು ಹಿರಿಯ ರೈತ ಹೋರಾಗಾರರು ಸಾವನ್ನಪ್ಪಿದ್ದಾರೆ. ನವಲಗುಂದದಿಂದ ಬೇಲೂರಿಗೆ ಹೋಗುತ್ತಿದ್ದ ವೇಳೆ ಸಂಭವಿಸಿದ ಕಾರು ಅಪಘಾತದಲ್ಲಿ ಹಿರಿಯ ರೈತ ಹೋರಾಟಗಾರ ಜಿಟಿ ರಾಮಸ್ವಾಮಿ (70), ರಾಮ (55) ಎಂಬುವರು ಸಾವನ್ನಪ್ಪಿದ್ದಾರೆ.

ಜಿಲ್ಲೆಯ ರಾಮನಹಳ್ಳಿ ಬಳಿ ಘಟನೆ ಕಾರು ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಇನ್ನು ಮೃತ ರೈತ ರಾಮಸ್ವಾಮಿ ರಾಜ್ಯ ರೈತ ಸಂಘದ ಉಪ್ಯಾಧ್ಯಕ್ಷರಾಗಿದ್ದರು. ಹಾಗೆಯೇ ರಾಮ ಎಂಬುವರು ರಾಜ್ಯ ರೈತ ಸಂಘ ಕಾರ್ಯದರ್ಶಿಯಾಗಿದ್ದರು.

ರಾಮಸ್ವಾಮಿ ರಾಮನಗರದ ಮೂಲದವರು, ರಾಮ ಹಾಸನದ ಬೇಲೂರಿನವರು. ಕಾರಿನಲ್ಲಿದ ಮತ್ತೊಬ್ಬರು ತೀವ್ರ ಗಾಯಗೊಂಡಿದ್ದು ಸ್ಥಿತಿ ಗಂಭೀರವಾಗಿದೆ. ಧಾರವಾಡ ಜಿಲ್ಲೆಯ‌ ನವಲಗುಂದದಲ್ಲಿ ನಡೆದ ರೈತ ಹುತಾತ್ಮ‌ ದಿನಾಚರಣೆಯಲ್ಲಿ‌ ಪಾಲ್ಗೊಂಡು ಹಾಸನ ಜಿಲ್ಲೆಯ‌ ಬೇಲೂರಿಗೆ ಬರುತ್ತಿದ್ದ ವೇಳೆ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬೆಳಿಗ್ಗೆ 7 ಗಂಟೆ ಹೊತ್ತಿಗೆ ಅವಘಡ ಸಂಭವಿಸಿದೆ. ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Donate Janashakthi Media

Leave a Reply

Your email address will not be published. Required fields are marked *