ಅಂಬೇಡ್ಕರ್ ರನ್ನು ಅವಮಾನಿಸಿದ ನ್ಯಾಯಾಧೀಶರ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಗೆ ಅಡ್ಡಿಪಡಿಸಿದ ABVP ಕಾರ್ಯಕರ್ತರು

ಬೆಂಗಳೂರು : ರಾಯಚೂರಿನಲ್ಲಿ ನ್ಯಾಯಾಧೀಶರು ಅಂಬೇಡ್ಕರ್ ರವರಿಗೆ ಅವಮಾನ ಮಾಡಿದ ಹಿನ್ನೆಲೆ ಬೆಂಗಳೂರು ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸುತ್ತಿರುವಾಗ ABVP ಕಾರ್ಯಕರ್ತರು ಪ್ರತಿಭಟನೆಗೆ ಅಡ್ಡಿಪಡಿಸಿದ್ದಾರೆ.

ಮಾರ್ಕ್ಸ್ ಕಾರ್ಡ್, ಫಲಿತಾಂಶ ತಡವಾಗಿ ಬರುತ್ತಿರುವ ಹಿನ್ನೆಲೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾದರು ಆಗ, ಸಂಶೋಧನಾ ವಿದ್ಯಾರ್ಥಿಗಳು ಇವತ್ತಿನ‌ ಪ್ರತಿಭಟನೆ ಮುಖ್ಯ ಇದೆ. ನ್ಯಾಯಾಧೀಶರು ಅಂಬೇಡ್ಕರರನ್ನು‌ ಅವಮಾನಿಸಿದದ್ದಾರೆ. ಅದನ್ನು ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದೇವೆ ನೀವು ನಾಳೆ ಮಾಡಿ ಎಂದು ಮನವಿ ಮಾಡುವ ವೇಳೆ ಎರಡು ವಿದ್ಯಾರ್ಥಿ ಸಂಘಟನೆಗಳ ಗುಂಪಿನ‌ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಪರಿಸ್ಥಿತಿ ನಿಯಂತ್ರಸಿಲು ಪೊಲೀಸರು ಲಘುಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ ಕೆಲ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ABVP ಕಾರ್ಯಕರ್ತರು ಸಂಶೋಧನಾ ವಿದ್ಯಾರ್ಥಿಗಳ‌ ಪ್ರತಿಭಟನೆಗೆ ಅಡ್ಡಿಪಡಿಸಿದ್ದೆ ಮಾರಾಮಾರಿಗೆ ಕಾರಣ ಎನ್ನಲಾಗುತ್ತಿದೆ.

Donate Janashakthi Media

Leave a Reply

Your email address will not be published. Required fields are marked *