ದುರ್ಗಾ ಪೂಜೆಗಿಟ್ಟ ಸೇಬು ಹಣ್ಣನ್ನು ತಿಂದಿದ್ದಕ್ಕೆ 6 ವರ್ಷದ ಬಾಲಕನ ಕೊಲೆ!

ಗಯಾ: ದುರ್ಗಾ ದೇವಿಯ ಪೂಜೆಗೆ  ಇಟ್ಟ ಸೇಬು ಹಣ್ಣನ್ನು ತಿಂದಿದ್ದಕ್ಕೆ 6 ವರ್ಷದ ವಿದ್ಯಾರ್ಥಿಯನ್ನು ಶಾಲೆಯಲ್ಲಿ ಹೊಡೆದು ಕೊಂದಿರುವ ಆಘಾತಕಾರಿ ಘಟನೆ  ಬಿಹಾರದ ಗಯಾದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಗಯಾದ ಬಾಕಿ ಬಿಘಾ ಗ್ರಾಮದಲ್ಲಿ ಲಿಟಲ್ ಲೀಡರ್ಸ್ ಪಬ್ಲಿಕ್ ಸ್ಕೂಲ್ ಎಂಬ ಶಾಲೆಯನ್ನು ನಡೆಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.

ದುರ್ಗಾ ದೇವಿಯ ಪೂಜೆಗೆ ಸೇಬು ಇಡಲಾಗಿತ್ತು. ಆದರೆ ಏನೂ ಅರಿಯದ ಆರು ವರ್ಷದ ಮಗು ಆ ಸೇಬು ಅಣ್ಣನ್ನು ತಿಂದಿದ್ದಾನೆ. ಇದೇ ಕಾರಣಕ್ಕೆ ಆ ಆರು ವರ್ಷದ ವಿದ್ಯಾರ್ಥಿಯನ್ನು ಶಾಲೆಯಲ್ಲಿ ಥಳಿಸಿ ಕೊಂದಿರುವ ಘಟನೆ ಗಯಾದಲ್ಲಿ ನಡೆದಿದೆ. ಮೃತ ಬಾಲಕನ್ನು ವಿವೇಕ್ ಎಂದು ಗುರುತಿಸಲಾಗಿದೆ. ಶಾಲೆಯ ಆವರಣದೊಳಗೆ ದುರ್ಗಾಪೂಜೆ ಆಯೋಜಿಸಲಾಗಿತ್ತು. ಈ ವೇಳೆ ವಿವೇಕ್ ಪೂಜೆಗೆಂದು ಇಟ್ಟಿದ್ದ ಸೇಬು ಹಣ್ಣು ತಿಂದಿದ್ದಾನೆ. ಇದರಿಂದ ಕೋಪಗೊಂಡ ಶಾಲಾ ಸಿಬ್ಬಂದಿಗಳು ಆತನನ್ನು ಶಾಲಾ ಕೊಠಡಿಗೆ ಕರೆದೊಯ್ದು ಥಳಿಸಿದ್ದಾರೆ. ನಂತರ ಅವನನ್ನು ಶಾಲೆಯಿಂದ ಹೊರಹಾಕಲಾಯಿತು. ವಿವೇಕ್ ಶಾಲೆಯ ಗೇಟ್‌ ನ ಹೊರಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದನು. ಆಟೋ ಡ್ರೈವರ್ ಅವನನ್ನು ಗುರುತಿಸಿ ಮನೆಗೆ ಕರೆತಂದನು. ನಂತರ ಅವನನ್ನು ಚಿಕಿತ್ಸೆಗಾಗಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯುವ ಮಾರ್ಗಮಧ್ಯೆ ವಿವೇಕ್ ಮೃತಪಟ್ಟಿದ್ದಾನೆ ಎಂದು ವಿವೇಕ್‌ ಅಜ್ಜ ಹೇಳಿದ್ದಾರೆ.

ಸಾಯುವ ಮೊದಲು, ವಿವೇಕ್ ತನ್ನ ಎದೆಗೆ ಹೊಡೆದದ್ದನ್ನು ತನ್ನ ಕುಟುಂಬಕ್ಕೆ ತಿಳಿಸಿದ್ದಾನೆ. ಇದೀಗ ಬಾಕಿ ಬಿಘಾ ಗ್ರಾಮದ ಲಿಟಲ್ ಲೀಡರ್ಸ್ ಪಬ್ಲಿಕ್ ಸ್ಕೂಲ್ ಎಂಬ ಶಾಲೆ ನಡೆಸುತ್ತಿರುವ ಇಬ್ಬರನ್ನು ಬಂಧಿಸಲಾಗಿದೆ. ಈ ಘಟನೆ ಸಂಬಂಧ ದೂರು ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವಜೀರ್‌ ಗಂಜ್‌ ನ ಎಸ್‌ಎಚ್‌ಒ ರಾಮ್ ಎಕ್ಬಾಲ್ ಯಾದವ್ ಹೇಳಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *