ದೆಹಲಿ: ಗೋಕುಲಪುರಿಯಲ್ಲಿ ಅಗ್ನಿ ದುರಂತದಿಂದ 7 ಮಂದಿ ಸಜೀವ ದಹನ

ನವದೆಹಲಿ: ಗೋಕುಲಪುರಿ ಪ್ರದೇಶದಲ್ಲಿನ ಗುಡಿಸಲುಗಳಿಗೆ ಸಂಭವಿಸಿದ ಅಗ್ನಿ ದುರಂತದಿಂದಾಗಿ 7 ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ರಾತ್ರಿ ಬೆಂಕಿ ಹೊತ್ತಿಕೊಂಡಿತ್ತು. 13 ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ಆರಂಭಿಸಿದ್ದು, ಶನಿವಾರ ಮುಂಜಾನೆವರೆಗೂ ಕಾರ್ಯಾಚರಣೆ ನಡೆಯಿತು.

ಘಟನೆಯು ಮುಂಜಾನೆ 1 ಗಂಟೆ ಸುಮಾರಿಗೆ ಆಗಿದ್ದು, ಎಂಬ ಮಾಹಿತಿ ಇದೆ. ಸುಮಾರು 60 ಗುಡಿಸಲುಗಳಲ್ಲಿ ಬೆಂಕಿ ಹೊತ್ತಿಕೊಂಡ ಬಗ್ಗೆ ನಮಗೆ ಕರೆ ಬಂತು ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ. ತಕ್ಷಣ ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ತೆರಳಿದವು. ಘಟನೆಯಲ್ಲಿ 6 ಜನರು ಸಜೀವವಾಗಿ ದಹನವಾಗಿದ್ದು, ಹಲವಾರು ಜನರಿಗೆ ಗಾಯಗಳಾಗಿವೆ.

ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಗುರುತಿಸಲಾಗದ ಸ್ಥಿತಿಯಲ್ಲಿವೆ, ಗುಡಿಸಲಿನಲ್ಲಿ ಜನರು ಗಾಢನಿದ್ದೆಯಲ್ಲಿದ್ದ ಸಮಯದಲ್ಲಿ ಅತ್ಯಂತ ವೇಗವಾಗಿ ಬೆಂಕಿ ಹರಡಿದ್ದರಿಂದ ಮಲಗಿದ್ದವರಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ದೆಹಲಿಯ ಹೆಚ್ಚುವರಿ ಪೊಲೀಸ್ ಉಪ ಆಯುಕ್ತ (ಈಶಾನ್ಯ) ದೇವೇಶ್ ಕುಮಾರ್ ಮಹ್ಲಾ ಈ ಕುರಿತು ಪ್ರತಿಕ್ರಿಯೆ ನೀಡಿ “ರಾತ್ರಿ 1 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿರುವ ಕುರಿತು ಮಾಹಿತಿ ತಿಳಿಯಿತು. ತಕ್ಷಣ 13 ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ತೆರಳಿತು. ಸುಮಾರು 4 ಗಂಟೆಯ ತನಕ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿವೆ” ಎಂದರು.

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ, ‘ಮುಂಜಾನೆ ಘಟನೆ ಬಗ್ಗೆ ಮಾಹಿತಿ ತಿಳಿಯಿತು. ನಾನು ಘಟನಾ ಸ್ಥಳಕ್ಕೆ ಹೋಗುತ್ತಿದ್ದೇನೆ. ಗಾಯಾಳುಗಳನ್ನು ಸಹ ಭೇಟಿಯಾಗುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *