ಹೆಲ್ಮೆಟ್ ದರಿಸಿ ಪಂಚಾಯತಿ ಸಭೆಯಲ್ಲಿ ಭಾಗವಹಿಸಿದ ಸಿಪಿಎಂ ಮುಖಂಡ

ಮಡಿಕೇರಿ: ಸಿದ್ದಾಪುರ ಗ್ರಾಮ ಪಂಚಾಯತಿ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆಯಲ್ಲಿ ಸಿಪಿಎಂ ಪಕ್ಷದ ಮುಖಂಡ ಎಚ್.ಬಿ ರಮೇಶ್ ಅವರು ಹೆಲ್ಮೆಟ್ ಧರಿಸಿ ಸಭೆಯಲ್ಲಿ ಭಾಗವಹಿಸುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಿದರು.

ಸಿದ್ದಾಪುರ ಗ್ರಾಮ ಪಂಚಾಯತಿಯ ಸಭಾಂಗಣದ ಮೇಲ್ಛಾವಣಿ ಅಪಾಯದ ಹಂತದಲ್ಲಿದೆ. ಇದರ ಬಗ್ಗೆ ಹಿಂದಿನ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರೂ ಗ್ರಾಮ ಪಂಚಾಯತಿ ನಿರ್ಲಕ್ಷ್ಯ ತೋರಿದ್ದಾರೆ. ಹಾಗಾಗಿ ಹೆಲ್ಮೆಟ್ ಧರಿಸಿ ಸಭೆಯಲ್ಲಿ ಭಾಗವಹಿಸಿರುವುದಾಗಿ ರಮೇಶ್ ತಿಳಿಸಿದರು.

ಹಲವು ಬಾರಿ ಮನವಿ ಮಾಡಿದ್ದೇವೆ, ಆದರೆ ಅದನ್ನು ದುರಸ್ತಿ ಮಾಡಿಸಲು ಅಧಿಕಾರಿಗಳು ಮುಂದಾಗುತ್ತಿಲ್ಲ. ತಾವಿರುವ ಜಾಗವನ್ನೆ ಭದ್ರಗೊಳಿಸದ ಅಧಿಕಾರಿಗಳು, ಜನ ಸಾಮಾನ್ಯರಿಗೆ ಸೌಲಭ್ಯಗಳನ್ನು ನೀಡಲು ಕಾಳಜಿ ವಹಿಸುತ್ತಾರೆಯೇ? ಇದು ಸಾಂಕೇತಿಕ ಪ್ರತಿಭಟನೆ, ಕೂಡಲೇ ಮೇಲ್ಛಾವಣಿ ದುರಸ್ತಿ ಮಾಡಿಸದೆ ಹೋದಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ರಮೇಶ್‌ ಎಚ್ಚರಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *