ವಿಶ್ವೇಶ್ವರ್‌ ಹೆಗಡೆ ಕಾಗೇರಿ ಗೆಲುವು

ಉತ್ತರಕನ್ನಡ : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ್‌ ಹೆಗಡೆ ಕಾಗೇರಿ ಗೆಲುವು ಸಾಧಿಸಿದ್ದಾರೆ.

ಲೋಕಸಭಾ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ಲಿಂಬಾಳ್ಕರ್‌ ವಿರುದ್ಧ ವಿಶ್ವೇಶ್ವರ್‌ ಹೆಗಡೆ ಕಾಗೇರಿ ಅವರು 2 ಲಕ್ಷಕ್ಕೂ ಅಧಿಕ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಹಿಂದೆ ಕಾಂಗ್ರೆಸ್‌ ಹೈಕಮಾಂಡ್‌ ಇದೆ; ಎಚ್‌.ಡಿ. ಕುಮಾರಸ್ವಾಮಿ

ಈಗಾಗಲೇ ಕೋಲಾರದಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ಮಲ್ಲೇಶ್‌ ಬಾಬು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನ ಕೆ.ವಿ ಗೌತಮ್‌ ವಿರುದ್ಧ ಮಲ್ಲೇಶ್‌ ಬಾಬು 47 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲವು ಸಾಧಿಸಿದ್ದಾರೆ.

ಇದನ್ನೂ ನೋಡಿ: ಲೋಕಮತ 2024| ಫಲಿತಾಂಶಕ್ಕೆ ಕ್ಷಣಗಣನೆ

Donate Janashakthi Media

Leave a Reply

Your email address will not be published. Required fields are marked *