ಕೆ ಕವಿತಾ, ಮನೀಶ್ ಸಿಸೋಡಿಯಾ ಗೆ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ ಕವಿತಾ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಜುಲೈ 25 ರವರೆಗೆ ವಿಸ್ತರಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಈ ಹಿಂದೆ ನೀಡಲಾಗಿದ್ದ ಕಸ್ಟಡಿ ಅವಧಿ ಮುಗಿದಿರುವ ಕಾರಣ ಅವರ ನ್ಯಾಯಾಂಗ ಬಂಧನವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಸ್ತರಿಸಿದರು.

ಜುಲೈ 1 ರಂದು ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಎರಡು ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಕೆ ಕವಿತಾ ಗೆ ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿತ್ತು.

ಇದನ್ನೂ ಓದಿ: ಬಿಆರ್‌ಎಸ್ ನಾಯಕಿ ಕೆ ಕವಿತಾ ಜಾಮೀನು ತಿರಸ್ಕಾರ

ಇದಕ್ಕೂ ಮುನ್ನ ನ್ಯಾಯಾಲಯವು ಕವಿತಾ ಮತ್ತು ಮನೀಶ್ ಸಿಸೋಡಿಯಾ ರೊಂದಿಗೆ ಆರೋಪಿಗಳಾಗಿದ್ದ  ಪ್ರಿನ್ಸ್, ದಾಮೋದರ್ ಮತ್ತು ಅರವಿಂದ್ ಸಿಂಗ್ ಗೆ ಜಾಮೀನು ನೀಡಿತ್ತು.

ಎಕನಾಮಿಕ್ ಟೈಮ್ಸ್ ಪ್ರಕಾರ, “ಇದು ಅಕ್ರಮ ಹಣ ವರ್ಗಾವಣೆ ಪ್ರಕರಣವಲ್ಲ, ರಾಜಕೀಯ ಲಾಂಡರಿಂಗ್ ಪ್ರಕರಣ, ಇದೊಂದು ಕಟ್ಟು ಮತ್ತು ಸುಳ್ಳು ಪ್ರಕರಣ, ಒಬ್ಬ ಆರೋಪಿ ಬಿಜೆಪಿ ಸೇರಿದ್ದಾನೆ, ಎರಡನೇ ಆರೋಪಿ ಬಿಜೆಪಿ ಟಿಕೆಟ್ ಪಡೆಯುತ್ತಿದ್ದಾನೆ ಮತ್ತು ಮೂರನೇ ಆರೋಪಿ 50 ಕೋಟಿ ಚುನಾವಣಾ ಬಾಂಡ್‌ಗಳನ್ನು ನೀಡಿದ್ದಾರೆ, ಇದು ರಾಜಕೀಯ ಲಾಂಡರಿಂಗ್ ಪ್ರಕರಣವಾಗಿದೆ, ನಾವು ಹೊರಬರುತ್ತೇವೆ.” ಎಂದು ಕವಿತಾ ಹೇಳಿದ್ದರು.

ಕೆ ಕವಿತಾ ರನ್ನು ಮಾರ್ಚ್ 15 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಫೆಬ್ರವರಿ 26, 2023 ರಂದು ಅಬಕಾರಿ ನೀತಿ ಪ್ರಕರಣದಲ್ಲಿ ಅವರ ಪಾತ್ರಕ್ಕಾಗಿ ಸಿಸೋಡಿಯಾ ರನ್ನು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಬಂಧಿಸಿತು ಮತ್ತು ನಂತರ ಮಾರ್ಚ್ 9 ರಂದು ಸಂಬಂಧಿತ ಮನಿ ಲಾಂಡರಿಂಗ್ ಆರೋಪದ ಮೇಲೆ ಇಡಿ ಬಂಧಿಸಿತು.

ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಗಳನ್ನೂ ತಿರಸ್ಕರಿಸಲಾಗಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೂನ್ 26 ರಂದು ಪ್ರಕರಣದಲ್ಲಿ ಸಿಬಿಐನಿಂದ ಬಂಧಿಸಲ್ಪಟ್ಟ ನಂತರ ಜುಲೈ 12 ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದಾರೆ. ಎಎಪಿ ಸಂಚಾಲಕರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು.

ಇದನ್ನೂ ನೋಡಿ: ಹತ್ತಾರು ಜನರ ಹೊಗಳಿಕೆಯೆ ಪತ್ರಕರ್ತರಿಗೆ ಪದ್ಮಶ್ರೀ ಪ್ರಶಸ್ತಿ ಇದ್ದಂತೆJanashakthi Media

Donate Janashakthi Media

Leave a Reply

Your email address will not be published. Required fields are marked *