ಮುಂಗಾರು ಮಳೆ ಅಬ್ಬರದಿಂದ ಜಲಾಶಯಗಳು ಭರ್ತಿ; ನದಿಪಾತ್ರದ ಜಲಾವೃತ

ಬೆಂಗಳೂರು: ಮುಂಗಾರು ಮಳೆ ಅಬ್ಬರ ಮುಂದುವರೆದು, ಅನೇಕ ಕಡೆ ನಿರಂತರ ಮಳೆಯಿಂದ ಮರಗಳು ಧರೆಗುರುಳಿ ರಸ್ತೆ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಹಲವೆಡೆ ವಿದ್ಯುತ್‌ ಕಂಬಗಳು ಮುರಿದು ಬಿದ್ದು ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಹಲವು ಗ್ರಾಮಗಳಲ್ಲಿ ಜಲಾಶಯಗಳು ಭರ್ತಿಯಾಗಿ ಭಾರಿ ಪ್ರಮಾಣದ ನೀರನ್ನು ಹೊರಬಿಟ್ಟಿರುವುದರಿಂದ ನದಿಪಾತ್ರದ ಜಲಾವೃತಗೊಂಡಿವೆ. ಮುಂಗಾರು

ರಂಗನತಿಟ್ಟು ಪಕ್ಷಿಧಾಮ ಜಲಾವೃತಗೊಂಡಿದ್ದು, ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಪಕ್ಷಿ ಸಂಕುಲನ ಕಾವೇರಿಯ ಬೋರ್ಗರೆತಕ್ಕೆ ನಲುಗಿ ಹೋಗಿದೆ. ಬೋಟಿಂಗ್‌ ಪಾಯಿಂಟ್‌ ಅನ್ನು ಸ್ಥಗಿತಗೊಳಿಸಲಾಗಿದೆ. ಉತ್ತರ ಕರ್ನಾಟಕದ ಬೆಳಗಾವಿಯಲ್ಲೂ ಮಳೆಯ ಆರ್ಭಟ ಮುಂದುವರೆದಿದೆ. ಬೆಳಗಾವಿ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯ ರೌದ್ರನರ್ತನ ಮುಂದುವರೆದಿದೆ. ಭಾರಿ ಪ್ರಮಾಣದಲ್ಲಿ ಜಲಾಶಯಗಳಿಂದ ನೀರನ್ನು ಹೊರಬಿಡುತ್ತಿರುವುದರಿಂದ ನದಿಪಾತ್ರದ ಹಲವು ಗ್ರಾಮಗಳಲ್ಲಿ ಮುಳುಗಡೆ ಭೀತಿ ಎದುರಾಗಿದೆ. ಮುಂಗಾರು

ಮುನ್ನೆಚ್ಚರಿಕೆ ಕ್ರಮವಾಗಿ ಹಲವರನ್ನು ಸ್ಥಳಾಂತರ ಮಾಡಲಾಗಿದೆ. ಬೆಳಗಾವಿ, ಖಾನಾಪುರ ಮುಂತಾದೆಡೆ ಮಳೆ ಧಾರಕಾರವಾಗಿ ಸುರಿಯುತ್ತಿರುವುದರ ಜೊತೆಗೆ ಮಹಾರಾಷ್ಟ್ರದಿಂದ ಭಾರಿ ಪ್ರಮಾಣದಲ್ಲಿ ನೀರು ಹ ರಿದುಬರುತ್ತಿದ್ದು, ಹೊಲ-ಗದ್ದೆಗಳು ಜಲಾವೃತಗೊಂಡು ಪ್ರವಾಹದ ಭೀತಿ ಎದುರಾಗಿದೆ.

ಇದನ್ನೂ ಓದಿ: ಮುಡಾ ಹಗರಣ: ನನ್ನ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕೆ ತರಲು ಯತ್ನ- ದಾಖಲೆ ಸಮೇತ ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು

ದೂಪದಾಳ, ಮಾರ್ಕಂಡಯ್ಯ, ಬಳ್ಳಾರಿ ನಾಲದಿಂದ ಘಟಪ್ರಭಾ ನದಿಗೆ 60 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ಆಲಮಟ್ಟಿಯಿಂದ ಕೃಷ್ಣಾ ನದಿಗೆ 2,500 ಲಕ್ಷ ಕ್ಯೂಸೆಕ್‌್ಸ ನೀರನ್ನು ಹೊರಬಿಡಲಾಗುತ್ತಿದೆ. ನಾರಾಯಣಪುರ ಜಲಾಶಯದಿಂದಲೂ ಕೂಡ ಭಾರಿ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದ್ದು, ಕೃಷ್ಣ, ತುಂಗಭದ್ರಾ ತೀರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.

ಮಲೆನಾಡು ಭಾಗದ ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಧಾರಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.ಉತ್ತರಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೂಡ ಮಳೆ ನಿರಂತರವಾಗಿ ಸುರಿಯುತ್ತಿದೆ. ಹಲವೆಡೆ ಗುಡ್ಡ ಕುಸಿದಿದೆ. ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡು ಕಡಲ ಕೊರೆತ ಉಂಟಾಗಿದೆ.

ಹಾಸನ ಜಿಲ್ಲೆಯಲ್ಲಿ ಸತತ ಹತ್ತು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹೇಮಾವತಿ ಉಪನದಿಗಳಾದ ಐಗೂರು, ಎಡಕೆರೆ, ಪಾಲಳ್ಳಿ ಹೊಳೆಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿಯತೊಡಗಿದೆ.

ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತುಂಗ, ಭದ್ರ, ಘಟಪ್ರಭಾ, ಮಲಪ್ರಭಾ, ಕಾವೇರಿ, ನೇತ್ರಾವತಿ, ಅಘನಾಶಿನಿ ಸೇರಿದಂತೆ ಬಹುತೇಕ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹದ ಭೀತಿ ಎದುರಾಗಿದ್ದು, ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ನೋಡಿ: ಬಲವಂತದ ಭೂಸ್ವಾಧೀನ ವಿರೋಧಿಸಿ ಹೋರಾಟ : ಸಿಎಂ ಮನೆಗೆ ಹೊರಟಿದ್ದ ರೈತರ ಮೇಲೆ ಪೋಲಿಸ್ ದೌರ್ಜನ್ಯJanashakthi Media

Donate Janashakthi Media

Leave a Reply

Your email address will not be published. Required fields are marked *