ವಯನಾಡ್ ನಲ್ಲಿ ರಾಜ್ಯ ಸರ್ಕಾರದಿಂದ 100 ಮನೆಗಳ ನಿರ್ಮಾಣ: ಸಿಎಂ‌ ಸಿದ್ದರಾಮಯ್ಯ ಘೋಷಣೆ

ಪ್ರವಾಹ ಪೀಡಿತ ಕೇರಳದ ವಯನಾಡ್ ನಲ್ಲಿ 100 ಮನೆಗಳನ್ನು ರಾಜ್ಯ ಸರ್ಕಾರದಿಂದ ನಿರ್ಮಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಇತ್ತೀಚೆಗೆ ಭೂಕುಸಿತಕ್ಕೆ ಒಳಗಾಗಿದ್ದ ಶಿರಾಡಿ ಘಾಟ್ ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೂಕುಸಿತ ಹಾಗೂ ಪ್ರವಾಹದಿಂದ ತತ್ತರಿಸಿರುವ ಕೇರಳದ ರಾಜ್ಯಕ್ಕೆ ನೆರವು ಇನ್ನಷ್ಟು ವಿಸ್ತರಿಸಲಾಗುವುದು ಎಂದರು.

ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ಧೂರವಾಣಿ ಮೂಲಕ ಮಾತನಾಡಿದ್ದೇನೆ. ಅಗತ್ಯ ಇರುವ ನೆರವನ್ನು ವಿಸ್ತರಿಸುವುದಾಗಿ ಹೇಳಿದ್ದೇನೆ. ಘಟನೆಯಲ್ಲಿ ನಾಪತ್ತೆಯಾಗಿರುವ ಒಟ್ಟು ಕನ್ನಡಿಗರ ಲೆಕ್ಕ ಸಿಗಲು ಇನ್ನಷ್ಟು ಸಮಯ ಬೇಕು. ರಕ್ಷಣಾ ಕಾರ್ಯಾಚರಣೆ ಪೂರ್ತಿ ಮುಗಿದ ಬಳಿಕ ತಿಳಿಯಲಿದೆ ಎಂದು ಅವರು ಹೇಳಿದರು.

ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು ಎಂದರು.

Donate Janashakthi Media

Leave a Reply

Your email address will not be published. Required fields are marked *