ಬಾಂಗ್ಲಾದೇಶ-ಭಾರತ ನಡುವಿನ ಎಲ್ಲಾ ರೈಲು ಸಂಚಾರ ರದ್ದು!

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಭಾರತದ ಎಲ್ಲಾ ರೈಲು ಸಂಚಾರವನ್ನು ರದ್ದುಗೊಳಿಸಿ ಭಾರತೀಯ ರೈಲ್ವೆ ಆದೇಶ ಹೊರಡಿಸಿದೆ.

ಬಾಂಗ್ಲಾದೇಶದಲ್ಲಿ ಹಿಂಸಾಚಾರಕ್ಕೆ 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಸಲ್ಲಿಸಿ ಪಲಾಯನ ಮಾಡಿದ್ದಾರೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಬಾಂಗ್ಲಾದೇಶ ನಡುವೆ ಸಂಚರಿಸುತ್ತಿದ್ದ ಭಾರತದ ಎಲ್ಲಾ ರೈಲುಗಳನ್ನು ರದ್ದುಗೊಳಿಸಲಾಗಿದೆ.

ಕೋಲ್ಕತಾ-ಢಾಕಾ-ಕೋಲ್ಕತಾ ಮೈತ್ರಿ ಎಕ್ಸ್ ಪ್ರೆಸ್, ಕೋಲ್ಕತಾ-ಖುಲ್ನಾ, ಕೋಲ್ಕತಾ ಬಂಧನ್ ಎಕ್ಸ್ ಪ್ರೆಸ್ ಮತ್ತು ಢಾಕಾ- ನವ ಜಲಪೈಗುರಿ-ಢಾಕಾ ಮೈತ್ರಿ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ.

73 ವರ್ಷದ ಶೇಖ್ ಹಸೀನಾ 5 ಬಾರಿ ಬಾಂಗ್ಲಾದೇಶದ ಪ್ರಧಾನಿ ಹುದ್ದೆ ಅಲಂಕರಿಸಿದ್ದು ಕಳೆದ ಕೆಲವು ತಿಂಗಳಿಂದ ನಡೆಯುತ್ತಿರುವ ಹಿಂಸಾಚಾರದಲ್ಲಿ 300ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಹಿಂಸಾಚಾರ ಹತ್ತಿಕ್ಕಲು ವಿಫಲವಾದ ಹಿನ್ನೆಲೆಯಲ್ಲಿ ಶೇಖ್ ಹಸೀನಾ ಸೋಮವಾರ ಮಧ್ಯಾಹ್ನ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

Donate Janashakthi Media

Leave a Reply

Your email address will not be published. Required fields are marked *