ಸ್ವಾತಂತ್ರ್ಯ ದಿನಾಚಣೆಗೆ ಸಿದ್ದತೆ: ಅಂಗಾಂಗ ದಾನ ಮಾಡಿದ 64 ಕುಟುಂಬಗಳಿಗೆ ಸಿಎಂ ಸನ್ಮಾನ!

ಅಗಸ್ಟ್ 15ರಂದು ರಾಜ್ಯಮಟ್ಟದ ಸ್ವಾತಂತ್ರ್ಯ ದಿನ ಆಚರಣೆಗೆ ಬೆಂಗಳೂರು ಜಿಲ್ಲಾಡಳಿತ ಸಿದ್ಧತೆ ಪೂರ್ಣಗೊಳಿಸಿದ್ದು, ಅಂಗಾಂಗ ದಾನ ಮಾಡಿದ 64 ಕುಟುಂಬಗಳಿಗೆ ಮುಖ್ಯಮಂತ್ರಿ ಪ್ರಶಂಸಾ ಪತ್ರ ನೀಡಿ ಸನ್ಮಾನಿಸಲಿದ್ದಾರೆ.

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬೆಳಗ್ಗೆ 8.58ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಧ್ವಜಾರೋಹಣ ನಡೆಯಲಿದ್ದು, ನಂತರ ತೆರೆದ ಜೀಪ್ ನಲ್ಲಿ ಪೆರೇಡ್ ಪರಿವೀಕ್ಷಣೆ ನಡೆಸಲಿದ್ದಾರೆ.

ಕೆಎಸ್ ಆರ್ ಪಿ, ಸಿಆರ್ ಪಿಎಫ್, ಬಿಎಸ್ ಎಫ್, ಟ್ರಾಫಿಕ್ ಪೊಲೀಸ್, ಎನ್ ಸಿಸಿ NCC,NSS,  ಮಹಿಳಾ ಪೊಲೀಸ್, ಡಾಗ್ ಸ್ಕ್ವಾಡ್ , ಹೋಂಗಾರ್ಡ್ ಸೇರಿದಂತೆ 35 ತುಕಡಿ ಸೇರಿದಂತೆ 1150 ಜನರು ಪರೇಡ್ ನಲ್ಲಿ ಭಾಗಿಯಾಗಲಿದ್ದಾರೆ.

7 ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಸರ್ಕಾರದ 5 ಗ್ಯಾರಂಟಿ ಯೋಜನೆಗಳನ್ನು ತಿಳಿಸುವ ವಿಶೇಷ ಕಾರ್ಯಕ್ರಮ, ಮಲ್ಲಕಂಬ, ಪ್ಯಾರಾ ಮೋಟರ್ ಹಾಗೂ ಮೋಟಾರು ಸೈಕಲ್ ಪ್ರದರ್ಶನ ನಡೆಯಲಿದೆ.

Donate Janashakthi Media

Leave a Reply

Your email address will not be published. Required fields are marked *