ಶಿಗ್ಗಾಂವ್ ಉಪಚುನಾವಣೆ : ಕಾಂತೇಶ್ ಸ್ಪರ್ಧೆ ಮಾಡಲ್ಲ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಶಿವಮೊಗ್ಗ: ಶಿಗ್ಗಾಂವ್​ಗೆ ನಡೆಯಲಿರುವ ವಿಧಾನಸಭಾ ಉಪ ಚುನಾವಣೆಯಲ್ಲಿ ತನ್ನ ಮಗ ಕಾಂತೇಶ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲವೆಂದು ಹಿರಿಯ ರಾಜಕಾರಣಿ ಮತ್ತು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದರು

ಕಾಂತೇಶ್ ಈಶ್ವರಪ್ಪ ಶಿಗ್ಗಾವಿ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರಾ? ಎಂಬ ಚರ್ಚೆ ಆರಂಭವಾಗಿತ್ತು ಈ ಬಗ್ಗೆ ಸ್ವತಃ ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಶಿಗ್ಗಾವಿ ಉಪಚುನಾವಣೆಗೆ ಕಾಂತೇಶ್ ಸ್ಪರ್ಧೆ ಮಾಡಲ್ಲ ಎಂದಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲ ಗೆಹ್ಲೋಟ್!

ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಕೊಡುತ್ತೇವೆ ಎಂದು ಹೇಳಿ ಮೋಸ ಮಾಡಿದರು. ಹಾವೇರಿ ಜನ ಮನೆಗೆ ಬಂದು ನಿಮಗೆ ಮೋಸ ಆಯ್ತು ಅಂತಿದ್ದಾರೆ. ಈಗ ಉಪಚುನಾವಣೆಗೆ ಮಗ ಸ್ಪರ್ಧೆ ಮಾಡಲ್ಲ ಎಂದು ತಿಳಿಸಿದರು.

ಕಾಲಚಕ್ರ ಎನ್ನುವುದು ತಿರುಗುತ್ತಿರುತ್ತದೆ. ಕಾಲ ಹೀಗೇ ಇರುವುದಿಲ್ಲ. ಮೋಸ ಮಾಡಿದವರು ಅನುಭವಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ನೋಡಿ: ಶೋಷಣಾ ಮುಕ್ತ ಸಮಾಜ ನಿರ್ಮಾಣ ಸರ್ಕಾರದ ಕರ್ತವ್ಯವಾಗಬೇಕು – ಮೀನಾಕ್ಷಿ ಸುಂದರಂJanashakthi Media

Donate Janashakthi Media

Leave a Reply

Your email address will not be published. Required fields are marked *