ಡೆಂಗ್ಯೂ ನಿಯಂತ್ರಣಕ್ಕೆ ಮುಂದಾದ ರಾಜ್ಯ ಸರ್ಕಾರ : ನೈರ್ಮಲ್ಯ ಕಾಪಾಡದವರಿಗೆ ದಂಡ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಪಣತೊಟ್ಟಿದ್ದು, ಈ ಹಿನ್ನಲೆ ಡೆಂಗ್ಯೂ ವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಸರ್ಕಾರಘೋಷಿಸಿದೆ.

ಇನ್ನು ಮುಂದೆ ನೈರ್ಮಲ್ಯ(ಸ್ವಚ್ಚತೆ) ಕಾಪಾಡದವರಿಗೆ ದಂಡ ಬೀಳಲಿದೆ.  ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020ಕ್ಕೆ ತಿದ್ದುಪಡಿ ಮಾಡಿ ಆಗಸ್ಟ್ 31ರ ಕರ್ನಾಟಕ ಗೆಜೆಟ್​​ನಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಮನೆ, ಖಾಲಿ ಜಾಗ, ಕಟ್ಟಡದ ಬಳಿ ಸ್ವಚ್ಛತೆ ಕಾಪಾಡಬೇಕು. ಸೊಳ್ಳೆ ಸಂತಾನೋತ್ಪತ್ತಿ ಹರಡಲು ಅವಕಾಶ ನೀಡದಂತೆ ಕ್ರಮವಹಿಸಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಮಾಲೀಕರಿಗೆ ದಂಡ ವಿಧಿಸಬಹುದಾಗಿದೆ.

ಇದನ್ನು ಓದಿ : ಟೀಕಿಸುವ ಭರದಲ್ಲಿ ಅನುಚಿತ ಪದ ಬಳಕೆ; ಮುಖ್ಯಮಂತ್ರಿಗಳ ಕ್ಷಮೆ ಯಾಚಿಸಿದ ಶಾಸಕ ಅರವಿಂದ ಬೆಲ್ಲದ

ನಿಯಮಗಳು ಹೀಗಿವೆ

  • ಸೊಳ್ಳೆಗಳ ಸಂತಾನೋತ್ಪತ್ತಿ ಹರಡಲು ಅವಕಾಶ ನೀಡದಂತೆ ಕ್ರಮ ಕೈಗೊಳ್ಳಬೇಕು.
  • ಆಯಾ ಜಾಗದ ಮಾಲೀಕರು ಸೊಳ್ಳೆ ಬಾರದಂತೆ ಕ್ರಮ ವಹಿಸಬೇಕು.
  • ನಿಯಮವನ್ನು ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುವುದು.
  • ನಿವೇಶನ ಅಥವಾ ಖಾಲಿ ಜಾಗದಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಆ ರೀತಿ ಕಂಡು ಬಂದರೆ ನೋಟೀಸ್ ನೀಡಬೇಕು.
  • 24 ಗಂಟೆಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚನೆ.
  • ಸ್ವತ್ತಿನ ಮಾಲೀಕರು ನಿಗಾ ವಹಿಸಿದೆ ಇದ್ದರೆ, ಸಂಬಂಧ ಪಟ್ಟ ಅಧಿಕಾರಿ ಸೊಳ್ಳೆ ಉತ್ಪತ್ತಿಯಾಗದಂತೆ ಕ್ರಮ ವಹಿಸಬೇಕು.
  • ರಾಸಾಯನಿಕವನ್ನು ಸಿಂಪಡಿಸಬೇಕು. ಇದಕ್ಕೆ ಖರ್ಚಾದ ವೆಚ್ಚವನ್ನು ಸಂಬಂಧ ಪಟ್ಟವರು ನೀಡುವಂತೆ ಕ್ರಮ ವಹಿಸಬೇಕು.
  • ಬಿಬಿಎಂಪಿ ಹಾಗೂ ಮಂಗಳೂರಿನಲ್ಲಿ ತೆರೆದ ಸ್ಥಳದಲಿ ನಿಂತ ನೀರನ್ನ ತೆರವುಗೊಳಿಲು ಆಯಾ ಮಾಲೀಕರೇ ಹೊಣೆ ಸೊಳ್ಳೆ ಉತ್ಪತ್ತಿಯಾಗುವ ಸ್ಥಳವನ್ನ ಅಧಿಕಾರಿಗಳು ಪರಿಶೀಲನೆ ನಡೆಸಬೇಕು.

ಸ್ವಚ್ಛತೆ ಕಾಪಾಡದವರಿಗೆ ಬೀಳಲಿದೆ ದಂಡ

  • ಮನೆಗಳಿಗೆ ಹೊರಾಂಗಣ ಹಾಗೂ ಒಳಾಂಗಣದಲ್ಲಿ ನಿಯಮ ಉಲ್ಲಂಘಿಸಿದರೆ – 400 ರೂಪಾಯಿ ದಂಡ – ನಗರ ಪ್ರದೇಶ ಗ್ರಾಮಾಂತರದಲ್ಲಿ ಓಳಾಂಗಣ ಹಾಗೂ ಹೊರಾಂಗಣಕ್ಕೆ 200 ರೂಪಾಯಿ ದಂಡ.
  • ರೆಸ್ಟೋರಂಟ್ , ಹೋಟೆಲ್, ತಿನಿಸುಗಳು, ಲಾಡ್ಜ್, ರೆಸಾರ್ಟ್, ಹೋಂ ಸ್ಟೇ, ಮಾರ್ಕೆಟ್, ಪಾರ್ಕ್, ಮಾಲ್, ಸೂಪರ್ ಮಾರ್ಕೆಟ್ , ತೆಂಗಿನಕಾಯಿ ಮಾರಾಟಗಾರರು, ಕಾರ್ಖಾನೆ, ಕೈಗಾರಿಕೆ, ಥಿಯೇಟರ್,
  • ಶಾಲೆಗಳು, ವಾಣಿಜ್ಯ ಸಂಸ್ಥೆಗಳು, ಕನ್ವೆಷನ್ ಹಾಲ್, ಇವುಗಳಲ್ಲಿ ರೂಲ್ಸ್ ಬ್ರೇಕ್ ಮಾಡಿದ್ರೆ ನಗರ ಪ್ರದೇಶದಲ್ಲಿ 1 ಸಾವಿರ ರೂ ದಂಡ.
  • ಗ್ರಾಮಾಂತರ ಭಾಗದಲ್ಲಿ 500 ರೂಪಾಯಿ ದಂಡ.
  • ತೆರೆದ ಸ್ಥಳಗಳಲ್ಲಿ ರೂಲ್ಸ್ ಬ್ರೇಕ್ ಮಾಡಿದರೆ – ನಗರದ ಪ್ರದೇಶದಲ್ಲಿ 2 ಸಾವಿರ ರೂಪಾಯಿ ದಂಡ, ಗ್ರಾಮಾಂತರದಲ್ಲಿ 1 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ.
  • ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆ ಕಳೆದ ಆಗಸ್ಟ್​ 26 ರಂದು ಸೊಳ್ಳೆಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಓವಿ ಟ್ರ್ಯಾಪ್ ಅಳವಡಿಕೆಗೆ
  • ಮುಂದಾಗಿತ್ತು. ಓವಿ ಟ್ರ್ಯಾಪ್ ಅಳವಡಿಕೆಗೆ ಮಾಗಡಿ ರಸ್ತೆಯ ಗೋಪಾಲಪುರದಲ್ಲಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದ್ದರು. ಇದೀಗ ಡೆಂಗ್ಯೂವನ್ನು ಸಾಂಕ್ರಾಮಿಕ ಕಾಯಿಲೆ
  • ಎಂದು ಸರ್ಕಾರ ಘೋಷಿಸಿ, ಅದರ ನಿಯಂತ್ರಣಕ್ಕೆ ಪಣತೊಟ್ಟಿದೆ.

ಇದನ್ನು ನೋಡಿ: ರೈತರ ಭೂಮಿ ಜಿಂದಾಲ್‌ಗೆ! ರೈತರ ಬೆನ್ನಿಗೆ ಚೂರಿ ಹಾಕಿದ ರಾಜ್ಯ ಸರ್ಕಾರ Janashakthi Media

Donate Janashakthi Media

Leave a Reply

Your email address will not be published. Required fields are marked *