ಕಾರು ಲಾರಿ ಢಿಕ್ಕಿ; ಒಬ್ಬ ಸ್ಥಳದಲ್ಲಿ ಸಾವು, ಐವರು ಗಾಯ

ಹಾಸನ : ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿ ವ್ಯಾಪ್ತಿಯ ಕೆಂಪು ಹೊಳೆ ಬಳಿಎರಡು ಕಾರು ಹಾಗೂ ಲಾರಿ ಮುಖಾಮುಖಿ ಢಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನಪ್ಪಿದ್ದು, ಐವರು ಗಾಯಗೊಂಡ ಘಟನೆ  ಸಂಭವಿಸಿದೆ.

ಹಾಸನ ತಾಲೂಕಿನ ಕಟ್ಟಾಯ ಸಮೀಪದ ನಾಯಕರಹಳ್ಳಿಯ ಚಂದ್ರೇಗೌಡ (50) ಮೃತಪಟ್ಟವರು.ಕಾರಿನಲ್ಲಿದ್ದ ಶೈಲಾ ಹಾಗೂ ಕಿರಣ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನು ಓದಿ : ಮೂರು ವರ್ಷದ ಮಗು ವಾಷಿಂಗ್ ಮೆಷಿನ್‌ನಲ್ಲಿ ಶವವಾಗಿ ಪತ್ತೆ; ತಿರುನಲ್ವೇಲಿಯಲ್ಲಿ ಘಟನೆ

ಗಾಯಾಳುಗಳಿಗೆ ಸಕಲೇಶಪುರ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ಕಳಿಸಲಾಗಿದೆ ತಿಳಿದುಬಂದಿದೆ.

ಧರ್ಮಸ್ಥಳದಿಂದ-ಬೆಂಗಳೂರು ಕಡೆಗೆ ಬರುತ್ತಿದ್ದ ಕಾರುಗಳು ಒಂದನ್ನೊಂದು ಹಿಂದಿಕ್ಕುತ್ತಿದ್ದಾಗ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸರಕು ತುಂಬಿದ ಲಾರಿಗೆ ಕೆಂಪುಹೊಳೆ ತಿರುವಿನಲ್ಲಿ ಢಿಕ್ಕಿ ಹೊಡೆದಿವೆ. ಲಾರಿ ಪ್ರಪಾತಕ್ಕೆ ಬೀಳುವುದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನು ನೋಡಿ : ಬೀದರ್: 19 ವರ್ಷದ ಯುವತಿಯ ಮೇಲೆ ಅತ್ಯಾಚಾರ, ಕೊಲೆ

Donate Janashakthi Media

Leave a Reply

Your email address will not be published. Required fields are marked *