ಡ್ರಗ್ಸ್​ ಸೇವನೆ; ಮಾರಾಟ ಮಾಡುವವರಿಗೆ ಕನಿಷ್ಠ 10 ವರ್ಷ ಜೈಲು‌ ಶಿಕ್ಷೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ನಗರದಲ್ಲಿ ಡ್ರಗ್ಸ್  ಹಾವಳಿ ಹೆಚ್ಚಾಗಿದ್ದು, ಶೇಕಡಾ 50ರಷ್ಟು ಪ್ರಕರಣಗಳು ದಾಖಲಾಗಿವೆ. ಮಂಗಳೂರಿನಲ್ಲಿ ಶೇ22 ರಷ್ಟು, ಬೇರೆ ಬೇರೆ ಜಿಲ್ಲೆಗಳಲ್ಲಿ‌ ಶೇ11 ರಷ್ಟು ಕೇಸ್​​ಗಳಿವೆ. ಡ್ರಗ್ಸ್​ ಹಾವಳಿ ತಡೆಗಟ್ಟಲು ಟಾಸ್ಕ್ ಫೋರ್ಸ್ ರಚಿಸಲು ತೀರ್ಮಾನಿಸಿದ್ದೇವೆ. ಗೃಹ ಸಚಿವರು, ಆರೋಗ್ಯ, ವೈದ್ಯಕೀಯ, ನಗರಾಭಿವೃದ್ಧಿ, ಐಟಿಬಿಟಿ ಇಲಾಖೆ ಸಚಿವರುಗಳು‌ ಈ ಟಾಸ್ಕ್​ ಫೋರ್ಸ್​​ನ ಸದಸ್ಯರಾಗಿರುತ್ತಾರೆ ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೇಳಿದರು. ಮಾರಾಟ

ಡ್ರಗ್ಸ್​ ಹಾವಳಿ ತಡೆಗಟ್ಟಲು ಗೃಹ ಸಚಿವರು, ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು, ಐಟಿಬಿಟಿ ಮತ್ತು ನಗರಾಭಿವೃದ್ಧಿ ಇಲಾಖೆ ಸಚಿವರು ಜೊತೆ‌ ಸಭೆ ನಡೆಸಿದೆ. ಸಭೆಯಲ್ಲಿ ಬೆಂಗಳೂರಿನ ಪೊಲೀಸ್ ಆಯುಕ್ತರು, ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು ಎಂದು ತಿಳಿಸಿದರು. ಮಾರಾಟ

ಇದನ್ನೂ ಓದಿ: ರಸ್ತೆ ಬಿಟ್ಟು ಕೆಳಗೆ ನುಗ್ಗಿದ ಶಾಲಾ ಬಸ್

ಡ್ರಗ್ಸ್​ ತಡೆಗಟ್ಟಲು ಕಾನೂನಿನಲ್ಲಿ ತಿದ್ದುಪಡಿ ಅಥವಾ ಹೊಸ ಕಾನೂನು ಮಾಡುತ್ತೇವೆ. ಡ್ರಗ್ಸ್​ ಕೇಸ್​ನಲ್ಲಿ ಬಂಧನಕ್ಕೊಳಗಾದರೆ ಜಾಮೀನು ಸಿಗದಂತೆ ಮಾಡುತ್ತೇವೆ. ಡ್ರಗ್ಸ್​ ಸೇವನೆ ಮತ್ತು ಮಾರಾಟ ಮಾಡುವವರಿಗೆ ಕನಿಷ್ಠ 10 ವರ್ಷ ಜೈಲು‌ ಶಿಕ್ಷೆ ಆಗಲಿದೆ ಎಂದು ಹೇಳಿದರು.

ಡ್ರಗ್ಸ್​ ಹಾವಳಿ ತಡೆಗಟ್ಟಲು ರಾಜ್ಯ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಮಿಟಿ ಇದೆ. ಇದಕ್ಕೆ ಹೆಚ್​​ ಸಿಜಿ ಆಸ್ಪತ್ರೆ ಕ್ಯಾನರ್​ ತಜ್ಞ, ತಂಬಾಕು ನಿಯಂತ್ರಣ ಸಂಬಂಧಿತ ಉನ್ನತ ಮಟ್ಟದ ಸಮಿತಿ ಸದಸ್ಯ ಡಾ. ವಿಶಾಲ್​ ರಾವ್​ ಸದಸ್ಯರರಾಗಿದ್ದಾರೆ. ಇವರ ಅಭಿಪ್ರಾಯವನ್ನೂ ತೆಗೆಕೊಳ್ಳಲಾಗುತ್ತದೆ ಎಂದು ತಿಳಿಸಿದರು. ಬೆಂಗಳೂರು ಪೂರ್ವದಲ್ಲಿ ಅತಿ ಡಗ್ಸ್​ ಪೆಡ್ಲೆರ್ಸ್​ ಇದ್ದಾರೆ. ಹೀಗಾಗಿ ಅಲ್ಲಿಂದ ಅತಿ‌ ಹೆಚ್ಚು ಡ್ರಗ್ಸ್​ ಸರಬರಾಜು ಆಗುತ್ತಿದೆ. ಡ್ರಗ್ಸ್​​​​ನಲ್ಲಿ‌ ಸಿಂಥೆಟಿಕ್ ಬಂದಿದೆ. ಇದೆಲ್ಲ ಪೊಲೀಸ್​ ಠಾಣೆಗಳಿಗೆ ಗೊತ್ತಿಲ್ಲದೆ ನಡೆಯುವುದಿಲ್ಲ. ಇವೆಲ್ಲದರ ಬಗ್ಗೆ ಪೊಲೀಸರಿಗೆ ಮಾಹಿತಿ‌ ಇದ್ದೇ ಇರುತ್ತೆ ಎಂದರು.

ಮೆಡಿಕಲ್‌ ಶಾಪ್​​ಗಳಲ್ಲೂ ಡ್ರಗ್ಸ್ ಸಿಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈಗಾಗಲೇ ಕೆಲ ಮೆಡಿಕಲ್ ಶಾಪ್​​ಗಳ ಲೈಸೆನ್ಸ್ ರದ್ದು ಮಾಡಿದ್ದೇವೆ. ಡ್ರಗ್ಸ್ ಇಲ್ಲ ಅಂತ ಹೇಳಲ್ಲ, ಕಡಿಮೆ ಮಾಡಬೇಕು ನಂತರ ತಡೆಗಟ್ಟಬೇಕು. 2023ರಲ್ಲಿ 123 ಅಂತರಾಷ್ಟ್ರೀಯ ಡ್ರಗ್ಸ್​ ಸರಬರಾಜುದಾರರನ್ನು ಬಂಧಿಸಲಾಗಿದೆ. 2024ರಲ್ಲಿ 8,018 ಡ್ರಗ್ಸ್ ಸೇವನೆ ಮಾಡುವವರನ್ನು ಬಂಧಿಸಲಾಗಿದೆ. ಒಡಿಶಾ ಹಾಗೂ ಆಂಧ್ರ ಪ್ರದೇಶದಿಂದ ಡ್ರಗ್ಸ್ ಪೂರೈಕೆ ಆಗುತ್ತಿದೆ. ಮೊದಲು ಕಡಿಮೆ ಮಾಡಬೇಕು, ನಂತರ ಸಂಪೂರ್ಣ ನಿಲ್ಲಿಸಬೇಕು ಎಂದು ಹೇಳಿದರು.

ಡ್ರಗ್ಸ್ ಹಾವಳಿಯಿಂದ ಅಪರಾಧ ಪ್ರಕರಣ ಹೆಚ್ಚಳ

ಡ್ರಗ್ಸ್​ ಸೇವನೆಯಿಂದ ಯುವ ಸಮೂಹ ಹಾಳಾಗುತ್ತಿದ್ದು, ಇದು ಸಮಾಜಕ್ಕೆ ಕಂಟಕ. ಡ್ರಗ್ಸ್ ತಡೆಗಟ್ಟಲು ಎನ್​ಜಿಒಗಳನ್ನು ಬಳಕೆ ಮಾಡಿಕೊಳ್ಳುತ್ತೇವೆ. ಡ್ರಗ್ಸ್ ತಡೆಗಟ್ಟಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಡ್ರಗ್ಸ್​ ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಡ್ರಗ್ಸ್ ಹಾವಳಿಯಿಂದ ಅಪರಾಧ ಪ್ರಕರಣ ಕೂಡ ಹೆಚ್ಚಾಗುತ್ತಿದೆ. ನಶೆಯಲ್ಲಿ ಚಾಕು ಇರಿತದಿಂದ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ.

ಹೀಗಾಗಿ ಡ್ರಗ್ಸ್ ಹಾವಳಿ ನಿಯಂತ್ರಿಸಲು ಟಾಸ್ಕ್​ಫೋರ್ಸ್​ ರಚನೆ ಮಾಡಲು ನಿರ್ಧರಿಸಿದ್ದೇವೆ. NCC, ಸ್ಕೌಡ್ಸ್ ಆ್ಯಂಡ್​ ಗೈಡ್ಸ್​ ವಿದ್ಯಾರ್ಥಿಗಳಿಗೆ ಇದರ ಬಗ್ಗೆ ಜಾಗೃತಿ ಮೂಡಿಸಿ, ಡ್ರಗ್ಸ್​ ತಡೆಗಟ್ಟುವಲ್ಲಿ ಅವರು ಭಾಗಿಯಾಗುವಂತೆ ಮಾಡುತ್ತೇವೆ ಎಂದರು.

ಇದನ್ನೂ ನೋಡಿ: ವಿಚ್ಛಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದು ನಿಲ್ಲಬೇಕು – ಸಿದ್ದರಾಮಯ್ಯ

Donate Janashakthi Media

Leave a Reply

Your email address will not be published. Required fields are marked *