ಜಾತಿ ನಿಂದನೆ ಹಾಗೂ ಬೆದರಿಕೆ ಆರೋಪ ಪ್ರಕರಣ ; ಮುನಿರತ್ನ ನಾಯ್ಡು 14 ದಿನಗಳ​ ನ್ಯಾಯಾಂಗ ಬಂಧನ

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಇಂದು ಜಾತಿ ನಿಂದನೆ ಹಾಗೂ ಬೆದರಿಕೆ ಆರೋಪ ಪ್ರಕರಣದಲ್ಲಿ ಇಂದು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, 14 ದಿನಗಳ​ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಈ ಹಿನ್ನೆಲೆಯಲ್ಲಿ ಮುನಿರತ್ನಗೆ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್​​​ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮುನಿರತ್ನ ಪರ ಹಿರಿಯ ವಕೀಲರಾದ ಚಂದ್ರಶೇಖರ್​​​​​ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 82ನೇ ಸಿಟಿ ಸಿವಿಲ್ ಕೊರ್ಟ್ ನಾಳೆಗೆ ಮುಂದೂಡಿ ಆದೇಶ ನೀಡಿದೆ.

 ಇದನ್ನು ಓದಿ : ತುಮಕೂರು: ಬಿಜೆಪಿ ಹಿರಿಯ ಮುಖಂಡ ಕಾರ್ಯಕರ್ತನಿಗೆ ಕಪಾಳಮೋಕ್ಷ

ಮುನಿರತ್ನ ವಿರುದ್ಧ ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಜೀವ ಬೆದರಿಕೆ, ಜಾತಿನಿಂದನೆ ಮಾಡಿದ್ದಾರೆ ಎಂದು ದೂರು ನೀಡಿದ್ದಕ್ಕೆ ಮುನಿರತ್ನರನ್ನು ಕೆಲ ದಿನಗಳ ಹಿಂದೆ ಕೋಲಾರದ ಗಡಿಯಲ್ಲಿ ಪೊಲೀಸರು ಬಂಧಿಸಿದ್ದರು.

ಕೋರ್ಟ್​​ಗೆ ಹಾಜರು ಪಡಿಸಿದ್ದಾಗ ಅವರಿಗೆ ಹೃದಯ ಸಂಬಂಧಿ ಕಾಯಿಲೆಗಳಿವೆ ಎಂದು ಜಡ್ಜ್​ ಎದುರು ಮುನಿರತ್ನ ಹೇಳಿಕೆ ಕೊಟ್ಟಿದ್ದರು. ಹೀಗಾಗಿ ನಿನ್ನೆ ಬೌರಿಂಗ್ ಆಸ್ಪತ್ರೆಯಲ್ಲಿ ಮುನಿರತ್ನಗೆ ಪೊಲೀಸರು ಮೆಡಿಕಲ್ ಚೆಕಪ್ ಮಾಡಿಸಿದ್ದಾಗ ಮುನಿರತ್ನಗೆ ಅನಾರೋಗ್ಯವೆಂದು ವೈದ್ಯರು ವರದಿ ನೀಡಿದ್ದರು.

ಇದನ್ನು ನೋಡಿ : ಸುಗ್ರೀವಾಜ್ಞೆ ಮೂಲಕ ಒಳ ಮೀಸಲಾತಿ ಜಾರಿ ಮಾಡಿ – ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ ಆಗ್ರಹ

Donate Janashakthi Media

Leave a Reply

Your email address will not be published. Required fields are marked *