ರಾಜಧಾನಿಯಲ್ಲಿ ಭೀಕರ ಹತ್ಯೆ: ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇಟ್ಟ ಕ್ರೂರಿ

ಬೆಂಗಳೂರು: ವ್ಯಕ್ತಿಯೊಬ್ಬ ವಿವಾಹಿತೆಯೊಬ್ಬಳನ್ನು ಭೀಕರ ಹತ್ಯೆ ಮಾಡಿ, ಬಳಿಕ ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇಟ್ಟಿರುವಂತಹ ಭೀರ ಘಟನೆ ಬೇಮಗಳೂರಿನಲ್ಲಿ ನಡೆದಿದೆ. ರಾಜಧಾನಿ

ರಾಜಧಾನಿ ಬೆಂಗಳೂರಿನಲ್ಲಿ ದೆಹಲಿಯ ಶ್ರದ್ಧಾ ವಾಕರ್‌ ಮರ್ಡರ್‌ ರೀತಿಯ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ವಿವಾಹಿತೆಯನ್ನು ಕೊಂದು ಬಳಿಕ ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ.

ನೆಲಮಂಗಲ ಮೂಲದ ಮಹಾಲಕ್ಷ್ಮಿ ಮೃತ ದುರ್ದೈವಿ. ಬೆಂಗಳೂರಿನ ವೈಯಾಲಿ ಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೇಶ್ವರ ಬ್ಲಾಕ್‌ನಲ್ಲಿ ಘಟನೆ ನಡೆದಿದೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಡಿಸಿಪಿ ಶೇಖರ್ ತೆಕ್ಕಣ್ಣನವರ್, ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ಪರಿಶೀಲನೆ ನಡೆಸುತ್ತಿದ್ದಾರೆ. ಮೃತಳ ತಾಯಿ ಹಾಗೂ ಸಹೋದರಿ ಮಹಾಲಕ್ಷ್ಮಿ ಮನೆ ಬಳಿ ಬಂದಿದ್ದಾರೆ. ಮನೆ ಬೀಗ ಒಡೆದು ಒಳ ಹೋದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಕಳೆದ ಎರಡು ದಿನಗಳಿಂದ ಮನೆಯಿಂದ ಕೆಟ್ಟ ವಾಸನೆ ಬರುತ್ತಿತ್ತು. ಹೀಗಾಗಿ ಅದೇ ಬಿಲ್ಡಿಂಗ್‌ನ ಅಕ್ಕಪಕ್ಕದವರು ಇಂದು ಮಹಾಲಕ್ಷ್ಮಿ ಸಂಬಂಧಿಕರಿಗೆ ಹೇಳಿದ್ದಾರೆ. ಮನೆ ಬೀಗ ತೆಗೆದ ಸಂದರ್ಭದಲ್ಲಿ ಶವದಿಂದ ಹುಳಗಳ ಹೊರಗೆ ಬರುತ್ತಿತ್ತು ಎನ್ನಲಾಗಿದೆ.

ಇದನ್ನು ಓದಿ : ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಒಂದು ಪಾಪದ ಕೃತ್ಯ; ಹೈಕೋರ್ಟ್

10 ರಿಂದ 15 ದಿನಗಳ ಹಿಂದೆ ಕೊಲೆ ನಡೆದಿದೆ ಎನ್ನಲಾಗಿದೆ. ಕಳೆದ ಮೂರು ತಿಂಗಳ ಹಿಂದಷ್ಟೆ ಮಹಾಲಕ್ಷ್ಮಿ ಬಾಡಿಗೆ ಮನೆಗೆ ಬಂದಿದ್ದಳು. ಯುವಕನೊರ್ವ ಆಕೆಯನ್ನು ಪಿಕ್ ಅಪ್ ಮತ್ತು ಡ್ರಾಪ್ ಮಾಡುತ್ತಿದ್ದ. ಆತನೇ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. 30ಕ್ಕೂ ಹೆಚ್ಚು ತುಂಡುಗಳನ್ನಾಗಿ ದೇಹವನ್ನು ಕತ್ತರಿಸಿ ಬಳಿಕ ಫ್ರಿಜ್ಜ್‌ನಲ್ಲಿ ಇಟ್ಟು ಕೊಲೆಗಾರ ಎಸ್ಕೇಪ್‌ ಆಗಿದ್ದಾನೆ. ಸದ್ಯ ಪೊಲೀಸರು ಸ್ಥಳೀಯರಿಂದ ಮಾಹಿತಿ ಕಲೆ ಹಾಕುತ್ತಿದ್ದು, ಅಕ್ಕ ಪಕ್ಕದ ಮನೆಗಳ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ನಡೆಸಲಾಗುತ್ತಿದೆ.

ಈಗಾಗಲೇ ಮದುವೆ ಆಗಿರುವ ಮಹಾಲಕ್ಷ್ಮಿ ನೆಲಮಂಗಲದಲ್ಲಿರುವ ಪತಿಯಿಂದ ದೂರಾಗಿ ಒಂಟಿಯಾಗಿ ವೈಯಾಲಿಕಾವಲ್‌ನಲ್ಲಿ ವಾಸವಿದ್ದಳು. ಈ ದಂಪತಿಗೆ ನಾಲ್ಕು ವರ್ಷದ ಮಗು ಕೂಡ ಇದೆ ಎನ್ನಲಾಗಿದೆ. ಹಲವು ದಿನದಿಂದ ಕರೆ ಮಾಡಿದ್ದರು ಪತ್ನಿ ಮಹಾಲಕ್ಷ್ಮಿ ಸ್ವೀಕರಿಸುತ್ತಿರಲಿಲ್ಲ. ಇಂದು ಪತಿ ಬಂದು ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಬಾಗಿಲಯ ತರೆದಾಗ ಫ್ರಿಡ್ಜ್‌ನಿಂದ ಹುಳಗಳು ಹೊರಬರುತ್ತಿತ್ತು. ಸುಮಾರು 10-15ದಿನದ ಹಿಂದೆಯೆ ಕೊಲೆ ನಡೆದಿರುವ ಶಂಕೆ‌ ಇದೆ. ಈ ಕೃತ್ಯದ ಕುರಿತು ಮಾಹಿತಿ ನೀಡಿದ ಸ್ಥಳೀಯರು, ಸ್ವಲ್ಪ ಸಮಯದ ಕಾಲ ಮಹಾಲಕ್ಷ್ಮಿ ಅಣ್ಣ ಜೊತೆಗಿದ್ದರು. ಮಹಿಳೆಯ ಬಗೆಗೆ ಯಾವುದೇ ರೀತಿಯ ಮಾಹಿತಿ ಗೊತ್ತಿಲ್ಲ. ನಮ್ಮ ಬಳಿ ಮಾತನಾಡುವಾಗ ಕನ್ನಡದಲ್ಲೇ ಮಾತನಾಡುತ್ತಿದ್ದರು. ಸ್ಥಳೀಯ ಮಾಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.

ಪೊಲೀಸರು ಮಹಾಲಕ್ಷ್ಮಿ ಪತಿಯನ್ನು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸುತ್ತಿದ್ದಾರೆ. ಕೃತ್ಯ ಎಸಗಿದವರು ಯಾರು? ಯಾಕಾಗಿ ಕೊಲೆ ಮಾಡಲಾಯಿತು ಎಂಬುದು ತನಿಖೆಯಿಂದ ಹೊರಬರಬೇಕಿದೆ.

ಇದನ್ನು ನೋಡಿ : ಬೀದರ್: 19 ವರ್ಷದ ಯುವತಿಯ ಮೇಲೆ ಅತ್ಯಾಚಾರ, ಕೊಲೆ

Donate Janashakthi Media

Leave a Reply

Your email address will not be published. Required fields are marked *