ಗಂಗಾವತಿ : ಗಣಪತಿ ವಿಸರ್ಜನೆ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ, ಮೂವರ ಮೇಲೆ ಹಲ್ಲೆ

ಗಂಗಾವತಿ : ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಹಳೆ ವೈಷಮ್ಯದಿಂದ ಎರಡು ಗುಂಪುಗಳ ನಡುವೆ ಜಗಳ ಉಂಟಾಗಿ, ಯುವಕನೊಬ್ಬನಿಗೆ ಚಾಕು ಇರಿತವಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಇತರ ಮೂವರ ಮೇಲೆ ಹಲ್ಲೆಯಾಗಿದ್ದು, ಗಾಯಗಳಾಗಿವೆ.

ಚಾಕು ಇರಿತಕ್ಕೆ ಒಳಗಾದ ಅಂಬೇಡ್ಕರ್ ನಗರದ ಶಿವು (38) ಎಂಬಾತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕಳುಹಿಸಲಾಗಿದೆ. ಗಣೇಶ್, ಮಂಜು ಹಾಗೂ ಸಾಗರ್ ಹಲ್ಲೆಗೊಳಗಾದವರು.

ಗುಂಡಮ್ಮ ಕ್ಯಾಂಪಿನ ಗಣೇಶ ಮೂರ್ತಿಯ ಮೆರವಣಿಯ ಯಶೋಧಾ ಆಸ್ಪತ್ರೆಯ ಮುಂಭಾಗ ಬಂದಾಗ ಡ್ಯಾನ್ಸ್ ಮಾಡುತ್ತಿದ್ದ ಯುವಕರ ನಡುವೆ ಗಲಾಟೆ ನಡೆದಿದೆ. ಮುತ್ತಣ್ಣ, ಧರ್ಮಣ್ಣ, ಬಾಬು ವೆಂಕಟೇಶ, ಜಂಭ ಮತ್ತು ಇತರೆ 15 ಜನರು ಹಲ್ಲೆ ಮಾಡಿದ್ದಾಗಿ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.

15 ಜನರ ವಿರುದ್ದ ಹಲ್ಲೆ, ಕೊಲೆಗೆ ಯತ್ನ ಹಾಗೂ ಗಲಭೆ, ದೊಂಬಿ ಆರೋಪದಡಿಯಲ್ಲಿ ನಗರಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ. ಹಳೆ ವೈಷಮ್ಯ ಘಟನೆಗೆ ಕಾರಣ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

Donate Janashakthi Media

Leave a Reply

Your email address will not be published. Required fields are marked *