ಉರುಳಿಬಿದ್ದಿದ್ದ ಕೆಕೆಆರ್‌ಟಿಸಿ ಬಸ್ಸು: ಪ್ರಯಾಣಿಕರು ಅಪಾಯದಿಂದ ಪಾರು

ಹಗರಿಬೊಮ್ಮನಹಳ್ಳಿ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಾಲವಿ ಕ್ರಾಸ್ ಬಳಿ ಬುಧವಾರ ಬೆಳಿಗ್ಗೆ ಕೆಕೆಆರ್‌ಟಿಸಿ ಬಸ್ ಉರುಳಿಬಿದ್ದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬಸ್ಸು

ಹೊಸಪೇಟೆಯಿಂದ ಶಿವಮೊಗ್ಗ ಕಡೆಗೆ ಹೊರಟಿದ್ದ ಬಸ್ ವಾಹನ ಒಂದನ್ನು ಹಿಂದಿಕ್ಕಲು ಯತ್ನಿಸಿದಾಗ ಎದುರಿಗೆ ಲಾರಿ ಬಂದಿದೆ. ಅಪಘಾತ ಆಗುವುದನ್ನು ತಪ್ಪಿಸಲು ಬಸ್ ಚಾಲಕ ಬಸ್ಸನ್ನು ಪಕ್ಕಕ್ಕೆ ಕೊಂಡೊಯ್ದಿದ್ದಾನೆ. ಆಗ ಚಾಲಕನ ನಿಯಂತ್ರಣಕ್ಕೆ ಸಿಗದೆ ಬಸ್ ಉರುಳಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ : ಮಹಾಲಕ್ಷ್ಮೀ ಕೊಲೆ ಪ್ರಕರಣ: ಹಲವರ ಬೆರಳಚ್ಚು ಗುರುತು ಪತ್ತೆ

ಬಸ್‌ನ ಗಾಜುಗಳು ಒಡೆದಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಸ್ ಪಲ್ಟಿಯಾಗುತ್ತಿದ್ದಂತೆಯೇ ಪ್ರಯಾಣಿಕರು ಕಂಗಲಾಗಿ ಕೂಗಿಕೊಂಡರು, ಅಕ್ಕಪಕ್ಕದ ಜಮೀನುಗಳಲ್ಲಿದ್ದ ರೈತರು ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತಂದರು. ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು, ಬಸ್ ಡಿಪೋ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಬಸ್ಸು

ಇದನ್ನು ನೋಡಿ : ಸುಸ್ಥಿರ ಕನಸಿನ ಸಮಾಜದಲ್ಲಿನ ಅಸ್ಥಿರ ಬದುಕು – ವಲಸಿಗರ ಒಡಲಾಳದ ನೋವಿನ ಕಥನ Janashakthi Media

Donate Janashakthi Media

Leave a Reply

Your email address will not be published. Required fields are marked *