ಹೆರಿಗೆ ವೇಳೆ ಮಗು ಬದುಕಿ ತಾಯಿ ಸಾವು: ಜಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ದಾರುಣ ಘಟನೆ

ದಾವಣಗೆರೆ : ಜಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಮಗು ಬದುಕಿ ತಾಯಿ ಸಾವನ್ನಪ್ಪಿದ ದಾರುಣ ಘಟನೆ  ನಡೆದಿದೆ.

ತಾಲೂಕಿನ ತೊರೆಸಾಲು ಸಿದ್ದಿಹಳ್ಳಿ ಗ್ರಾಮದ ಮಹಿಳೆ ಸುಚಿತ್ರಾ (23) ಮೃತ ರ್ದುದೈವಿ. ಇನ್ನು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿದ ಸಂಬಂಧಿಕರು, ವೈದ್ಯ ಹಾಗೂ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಜಗಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನು ಓದಿ : 62 ಅಬಕಾರಿ ವಿಭಾಗ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಗಾಂಜಾ, ಮದ್ಯದ ಬಾಟಲಿಗಳು,ರೂ.2 ಲಕ್ಷ ರೂ. ಪತ್ತೆ

ಇದೇ ಸೆ.15 ರಂದು ಭಾನುವಾರ ಹೆರಿಗೆಗಾಗಿ ಜಗಳೂರು ಆಸ್ಪತ್ರೆಗೆ ಬಂದಿದ್ದರು. ಅದರಂತೆ ಇಂದು(ಬುಧವಾರ) ಹೆರಿಗೆ ವಿಳಂಭವಾಗಿ ಮಹಿಳೆ ತೀವ್ರ ರಕ್ತ ಶ್ರಾವದಿಂದ ಬಳಲಿದ್ದಾರೆ. ಈ ಹಿನ್ನಲೆ ವೈದ್ಯರು ಅಲ್ಲಿಂದ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆ ಆಗಿ ಮಗು ಬದುಕಿದ್ದು, ತಾಯಿ ಕೊನೆಯುಸಿರೆಳೆದಿದ್ದಾರೆ. ಜಗಳೂರು ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ವಿಳಂಬದಿಂದ ಸುಚಿತ್ರಾ ಸಾವಾಗಿದೆ ಎಂದು ಸಂಬಂಧಿಕರು ಆರೋಪಿಸಿ, ಜಗಳೂರು ಪೊಲೀಸ್ ಠಾಣೆ ಗೆ ದೂರು ನೀಡಿದ್ದಾರೆ. ಇನ್ನು ಮಹಿಳೆ ಸಂಬಂಧಿಕರು ಹಾಗೂ ದಲಿತ ಸಂಘಟನೆಗಳ ಪ್ರಮುಖರು ಸೇರಿ ಜಗಳೂರು ತಾಲೂಕಾ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಇದನ್ನು ನೋಡಿ : ಬಿಜೆಪಿ – ಜೆಡಿಎಸ್‌ ಸಂಚು, ಒಳಸಂಚು, ರಾಜಭವನ ದುರುಪಯೋಗ – ಇದ್ಯಾವುದಕ್ಕೂ ನಾನು ಹೆದರುವವನಲ್ಲ – ಸಿದ್ದರಾಮಯ್ಯ

 

Donate Janashakthi Media

Leave a Reply

Your email address will not be published. Required fields are marked *