50 ಕೋಟಿಗೆ ಬೇಡಿಕೆ; ಜೀವ ಬೆದರಿಕೆ ಆರೋಪದಡಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ದೂರು

ಬೆಂಗಳೂರು: 50 ಕೋಟಿಗೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ಎಂಬುವವರು ದೂರು ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಕುಮಾರಸ್ವಾಮಿ ಹಾಗೂ ರಮೇಶ್ ಗೌಡ ವಿರುದ್ಧ ದೂರು ನೀಡಿದ್ದೇನೆ. ಈ ಹಿಂದೆ ಕುಮಾರಸ್ವಾಮಿ ನನಗೆ ಫೋನ್ ಮಾಡಿದ್ರು. ಚುನಾವಣೆಗೆ ಐವತ್ತು ಕೋಟಿ ಕೊಡಿ ಎಂದರು, ಈ ವೇಳೆ ಆಗಲ್ಲ ಅಂತ ಹೇಳಿದೆ.

ಹಣ ನೀಡಲು ಸಾಧ್ಯಲ್ಲ ಎಂದಿದ್ದಕ್ಕೆ ಕುಮಾರಸ್ವಾಮಿ ತಮ್ಮ ಮೇಲೆ ಕೋಪಗೊಂಡು, ನಿಮ್ಮ ಪ್ರಾಜೆಕ್ಟ್ ಹೇಗೆ ಕಂಪ್ಲೇಟ್ ಮಾಡ್ತೀರಾ ನೋಡೋಣ, ಅದನ್ನು ಸಂಪೂರ್ಣ ಮಾಡಲು ಬಿಡೋಲ್ಲ ಅಂತ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ದೂರುದಾರ ಸ್ನೇಹಮಯಿ ಕೃಷ್ಣ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍

2019 ರ ಮಂಡ್ಯ ಲೋಕಸಭಾ ಚುನಾವಣೆ ವೇಳೆ ತಕ್ಷಣಕ್ಕೆ 50 ಕೋಟಿ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಇದನ್ನು ಕೊಡಲು ನಿರಾಕರಿಸಿದ ಹಿನ್ನೆಲೆ ನನ್ನ ಉದ್ಯಮ ಹಾಗೂ ನನ್ನ ಜೀವಕ್ಕೆ ಸಂಚಕಾರ ತರುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ವಿಜಯ್ ಟಾಟಾ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದ್ದು, ಸಂಚಲನ ಸೃಷ್ಟಿಸಿದೆ. ಇದಕ್ಕೆ ಹೆಚ್ ಡಿ ಕುಮಾರಸ್ವಾಮಿ ಯಾವ ರೀತಿಯ ಪ್ರತಿಕ್ರಿಯೆ ಕೊಡುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಇದನ್ನೂ ನೋಡಿ: ಗಾಂಧಿ ಸರ್ವೋದಯ, ಅಂಬೇಡ್ಕರ್ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ: ಸಿದ್ದರಾಮಯ್ಯJanashakthi Media

Donate Janashakthi Media

Leave a Reply

Your email address will not be published. Required fields are marked *