ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಯ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ

ಬೆಂಗಳೂರು: ಬ್ಯಾಂಕ್ ಸಿಬ್ಬಂದಿ ಮನೆ ಮೇಲೆ ಇಡಿ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಯ ಮನೆ ಮೇಲೆ ದಾಳಿ ನಡೆದಿದ್ದು, ಸತತವಾಗಿ ಎರಡನೇ ಬಾರಿಗೆ ದಾಳಿ ನಡೆಸಿದ್ದಾರೆ. ಸದ್ಯ 5 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಇದನ್ನು ಓದಿ : ಮುಡಾ ಹಗರಣ: ಖರ್ಗೆ ಅವರ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಚರ್ಚೆ

ದೆಹಲಿಯಲ್ಲಿ ದಾಖಲಾಗಿದ್ದ ಇಡಿ ಪ್ರಕರಣದ ಹಿನ್ನೆಲೆ ಬೆಂಗಳೂರಿನಲ್ಲಿ ಬ್ಯಾಂಕ್ ಸಿಬ್ಬಂದಿಯ ಮೇಲೆ ಸತತವಾಗಿ ಎರಡು ದಿನಗಳಿಂದ ದಾಳಿ ನಡೆಸಿದ್ದಾರೆ. ಗುರುವಾರ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ಮಾಡಿದ್ದಾರೆ.

ಇದನ್ನು ನೋಡಿ : ಬಿಜೆಪಿ – ಜೆಡಿಎಸ್‌ ಸಂಚು, ಒಳಸಂಚು, ರಾಜಭವನ ದುರುಪಯೋಗ – ಇದ್ಯಾವುದಕ್ಕೂ ನಾನು ಹೆದರುವವನಲ್ಲ – ಸಿದ್ದರಾಮಯ್ಯ

 

Donate Janashakthi Media

Leave a Reply

Your email address will not be published. Required fields are marked *