ಸರ್ಕಾರ ಜಾತಿಗಣತಿ ಜಾರಿ ಮಾಡಲೇಬೇಕು: ಸದಸ್ಯ ಬಿ.ಕೆ.ಹರಿಪ್ರಸಾದ್ ಒತ್ತಾಯ

ಬೆಂಗಳೂರು:  ಸರ್ಕಾರ ಜಾತಿಗಣತಿ ಜಾರಿ ಮಾಡಲೇಬೇಕು ಎಂದು ಹಿರಿಯ ಕಾಂಗ್ರೆಸ್‌ ನಾಯಕ ಬಿ.ಕೆ ಹರಿಪ್ರಸಾದ್‌ ಆಗ್ರಹಿಸಿದ್ದಾರೆ.

ಮೀಸಲಾತಿಯ ಒಳಮುಖ ಪುಸ್ತಕ ಲೋಕಾರ್ಪಣೆಗೊಳಿಸಿ ಮಾತನಾಡಿದ‌ ಅವರು,ಮೀಸಲಾತಿಯನ್ನು ಉಳಿಸುವುದು, ಜಾತಿ ಹಾಗೂ ಜನಗಣತಿಯನ್ನು ನಡೆಸುವುದು ನಮ್ಮ ಪಕ್ಷದ ಆದ್ಯ ಕರ್ತವ್ಯ.ಅಧಿಕಾರಕ್ಕಾಗಿ ಮೀಸಲಾತಿ ವಿಷಯದಲ್ಲಿ ರಾಜಿಯಾಗಲು ಎಂದೂ ಸಾಧ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಪ್ರಕರಣವನ್ನು ಮುಕ್ತಾಯಗೊಳಿಸಿದ ಸಿಬಿಐ ಮೋದಿ ಸರ್ಕಾರದಿಂದ ತನಿಖಾ ಸಂಸ್ಥೆಗಳ ದುರುಪಯೋಗದ ಇನ್ನೊಂದು ನಿದರ್ಶನ

ಚುಣಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲೇ ಜಾತಿ ಗಣತಿ ಜಾರಿ ವಿಚಾರ ಇರುವುದರಿಂದ ಕೂಡಲೇ ಜಾರಿ‌ ಮಾಡಬೇಕು. ಜಾತಿ ಗಣತಿ ಜಾರಿ ಮಾಡಿದರೆ ಸರ್ಕಾರ ಬಿದ್ದು ಹೋಗಲಿದೆ ಎಂಬ ಭಯ ಏಕೆ, ಯಾವುದಕ್ಕೂ ಅಂಜದೆ ಜಾತಿ ಗಣತಿ ಜಾರಿಯಾಗಲೇಬೇಕು ಎಂದು ಹೇಳಿದ್ದಾರೆ.

ಜಾತಿ ಗಣತಿ ಜಾರಿಗೆ ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆಯೊ ಗೊತ್ತಿಲ್ಲ, ಜಾತಿಗಣತಿಯಿಂದ ಎಲ್ಲಾ ಸಮುದಾಯಗಳಿಗೂ ಅನುಕೂಲ ಆಗಲಿದೆ ಎಂದು ತಿಳಿಸಿದರು.

ಇದನ್ನೂ ನೋಡಿ: ವಚನಾನುಭವ -15 ಕಾಗೆ ಒಂದಗುಳ ಕಂಡಡೆ | ಬಸವಣ್ಣ ವಚನ

Donate Janashakthi Media

Leave a Reply

Your email address will not be published. Required fields are marked *