ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಎನ್‌. ತಿಪ್ಪಣ್ಣ ನಿಧನ

ಳ್ಳಾರಿ: ಜುಲೈ 11 ಶುಕ್ರವಾರ ಮುಂಜಾನೆ ವಿಧಾನ ಪರಿಷತ್ತಿನ ಮಾಜಿ ಸಭಾಪತಿ, ಅಖಿಲ ಭಾರತ ವಿರಶೈವ‌ ಮಹಾಸಭಾ ರಾಜ್ಯ ಘಟಕದ ಮಾಜಿ ಅಧ್ಯಕ್ಷರೂ ಆದ ಎನ್‌. ತಿಪ್ಪಣ್ಣ (97)  ನಿಧನರಾಗಿದ್ದಾರೆ.

ತಿಪ್ಪಣ್ಣ ರಿಗೆ ಒಬ್ಬ ಪುತ್ರ ಇದ್ದಾರೆ. ಅವರ ಅಂತ್ಯ ಸಂಸ್ಕಾರವನ್ನು ಶನಿವಾರ, ಹುಟ್ಟೂರು ಚಿತ್ರದುರ್ಗ ಜಿಲ್ಲೆಯ ತುರವಿನೂರಿನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಬಳ್ಳಾರಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಋತುಮತಿಯಾದವರು ಯಾರೆಂದು ಪತ್ತೆ ಹಚ್ಚಲು ವಿದ್ಯಾರ್ಥಿನಿಯರನ್ನು ವಿವಸ್ತ್ರಗೊಳಿಸಿದ ಶಿಕ್ಷಕರು

ವಕೀಲರಾಗಿ ಹಲವು ವರ್ಷ ಕಾರ್ಯ ನಿರ್ವಹಿಸಿದ್ದ ಅವರು, ಬಳಿಕ ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದರು. ನಾಲ್ಕು ಬಾರಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದರು. ವಿರೋಧ ಪಕ್ಷದ ಉಪ ನಾಯಕರಾಗಿದ್ದರು. ಅಲ್ಪ ಅವಧಿಗೆ ಸಭಾಪತಿಯಾಗಿ ಕೆಲಸ ಮಾಡಿದ್ದರು.

ರಾಮಕೃಷ್ಣ ಹೆಗಡೆ ಅವರೊಂದಿಗೆ ಗುರುತಿಸಿಕೊಂಡಿದ್ದ ತಿಪ್ಪಣ್ಣ ಜನತಾದಳದಿಂದ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಬಳಿಕ ಜೆಡಿಯುನಲ್ಲಿ ಇದ್ದ ಅವರು ಪಕ್ಷವನ್ನು ಜೆಡಿಎಸ್‌ನಲ್ಲಿ ವಿಲೀನಗೊಳಿಸಿದ ಬಳಿಕ, ಜೆಡಿಎಸ್‌ನ ರಾಜ್ಯ ಘಟಕದ ಅಧ್ಯಕ್ಷರಾಗಿಯೂ ಅವರು ಕೆಲಸ ಮಾಡಿದ್ದಾರೆ.

2012ರಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷರಾಗಿಯೂ ತಿಪ್ಪಣ್ಣ ಆಯ್ಕೆಯಾಗಿದ್ದರು. ಇದಕ್ಕೂ ಹಿಂದೆಯೂ ಅವರು ಮಹಾಸಭಾದ ವಿವಿಧ ಸ್ತರಗಳಲ್ಲಿ ಕಾರ್ಯನಿರ್ವಹಿಸಿದ್ದರು. ಬಳ್ಳಾರಿಯ ಪ್ರತಿಷ್ಠಿತ ವೀರಶೈವ ವಿದ್ಯಾವರ್ದಕ ಸಂಘದ ಅಧ್ಯಕ್ಷ ಹಾಗೂ ಇನ್ನಿತರ ಹುದ್ದೆಗಳಲ್ಲಿ ಅವರು 20 ವರ್ಷ ಕೆಲಸ ಮಾಡಿದ್ದಾರೆ.

ಇದನ್ನೂ ನೋಡಿ: ಬೆಂಗಳೂರು | ಜುಲೈ13ರಂದು ಸಾಮ್ರಾಟ್ ಅಶೋಕ ನಾಟಕ ಪ್ರದರ್ಶನJanashakthi Media

Donate Janashakthi Media

Leave a Reply

Your email address will not be published. Required fields are marked *