ಈಜಿಪುರ ಮೇಲ್ಸೇತುವೆ ಯೋಜನೆ ಮಾರ್ಚ್ 2026 ರೊಳಗೆ ಪೂರ್ಣ: ಬಿಬಿಎಂಪಿ ಆಯುಕ್ತ ಮಹೇಶ್ವರ್‌ ರಾವ್‌

ಬೆಂಗಳೂರು:  ಹಲವು ವರ್ಷಗಳಿಂದ ಕಾಮಗಾರಿ ಪ್ರಗತಿಯಲ್ಲಿರುವ ಈಜಿಪುರ  ಮೇಲ್ಸೇತುವೆ ಯೋಜನೆ ಮಾರ್ಚ್ 2026 ರೊಳಗೆ ಪೂರ್ಣಗೊಳ್ಳಲಿದೆ. ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ ರಾವ್ ಜುಲೈ 18 ಶುಕ್ರವಾರದಂದು ಮೇಲ್ಸೇತುವೆಗೆ ಕಾಸ್ಟಿಕ್‌ ಮಾಡುವ ಕಾರ್ಯವನ್ನು ಪರಿಶೀಲಿಸಿ ಮಾತನಾಡಿದ ಅವರು, ನಿರ್ಮಾಣ ಕಾರ್ಯಗಳ ವೇಗ ಹೆಚ್ಚಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈಜಿಪುರ ಮುಖ್ಯರಸ್ತೆಯಲ್ಲಿ 2.38 ಕಿ.ಮೀ ಉದ್ದದ ಮೇಲ್ಸೇತುವೆ ನಿರ್ಮಿಸಲಾಗುತ್ತಿದೆ. ಒಟ್ಟು 762 ಸೆಗ್ಮೆಂಟ್‌ ಕಾಸ್ಟಿಂಗ್‌ಗಳನ್ನು ಅಳವಡಿಸಬೇಕಿದ್ದು, 437 ಸೆಗ್ಮೆಂಟ್‌ ಕಾಸ್ಟಿಂಗ್‌ ಅಳವಡಿಸಲಾಗಿದೆ. ಪ್ರತಿ ತಿಂಗಳು 45 ಸೆಗ್ಮೆಂಟ್‌ ಕಾಸ್ಟಿಂಗ್‌ ಅಳವಡಿಸಲಾಗುತ್ತಿದೆ ಎಂದು ಮುಖ್ಯ ಆಯುಕ್ತರಿಗೆ ಅಧಿಕಾರಿಗಳು ಮಾಹಿತಿ ನೀಡಿದರು.

ಇದನ್ನೂ ಓದಿ: ಆಟೋ ಟ್ರಾನ್ಸ್‌ಲೇಷನ್‌ ಎಡವಟ್ಟು: ಮೆಟಾ ಸಂಸ್ಥೆಗೆ ಸಿಎಂ ಸಿದ್ದರಾಮಯ್ಯ ಪತ್ರ

ಈ ವೇಳೆ ಆಯುಕ್ತರು ‘ಸೆಗ್ಮೆಂಟ್‌ ಕಾಸ್ಟಿಂಗ್‌ ಅಳವಡಿಕೆ ಕಾಮಗಾರಿಗೆ ಇನ್ನಷ್ಟು ವೇಗ ನೀಡಿ, ಈ ವರ್ಷಾಂತ್ಯಕ್ಕೆ ಪೂರ್ಣಗೊಳಿಸಬೇಕು. ಇನ್ನುಳಿದ ಕಾಮಗಾರಿಯನ್ನು 2026ರ ಮಾರ್ಚ್‌ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಮೇಲ್ಸೇತುವೆಗೆ ಕಾಸ್ಟಿಕ್‌ ಮಾಡುವ ಕಾರ್ಯವನ್ನು ಶುಕ್ರವಾರ ಪರಿಶೀಲಿಸಿ ಮಾತನಾಡಿದ ಅವರು ನಿರ್ಮಾಣ ಕಾರ್ಯಗಳ ವೇಗ ಹೆಚ್ಚಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈಜಿಪುರ ಮೇಲ್ಸೇತುವೆ ಕಾಮಗಾರಿಯಲ್ಲಿ ಸೆಗ್ಮೆಂಟ್‌ ಅನ್ನು ರಾತ್ರಿ 11ರಿಂದ ಬೆಳಿಗ್ಗೆ 5ರವರೆಗೆ ಮಾತ್ರ ಅಳವಡಿಸಲಾಗುತ್ತಿದೆ. ಉಳಿದ ಕಾಮಗಾರಿಯನ್ನು ಸಂಚಾರ ದಟ್ಟಣೆಯ ನಡುವೆಯೂ ಮಾಡಲಾಗುತ್ತಿದೆ.

ಪಾದಚಾರಿ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಮೇಲ್ಸೇತುವೆ ಕಾಮಗಾರಿ ಮುಗಿದಿರುವ ಕೆಳಭಾಗದ ರಸ್ತೆಯಲ್ಲಿ ಡಾಂಬರೀಕರಣ ಮಾಡಲಾಗಿದೆ. ಶೋಲ್ಡರ್‌ ಡ್ರೈನ್‌ ಮತ್ತು ಮೀಡಿಯನ್‌ ಕಾಮಗಾರಿ ನಡೆಯುತ್ತಿದೆ ಎಂದು ಯೋಜನೆಯ ಮುಖ್ಯ ಎಂಜಿನಿಯರ್‌ ರಾಘವೇಂದ್ರ ಪ್ರಸಾದ್‌ ಮಾಹಿತಿ ನೀಡಿದರು.

ಇದನ್ನೂ ನೋಡಿ: ಜೀವನಾಂಶ ಅಂದರೇನು? ಅದನ್ನು ಪಡೆಯುವುದು ಹೇಗೆ?Janashakthi Media

Donate Janashakthi Media

Leave a Reply

Your email address will not be published. Required fields are marked *