ಉತ್ತರಾಖಂಡ : ಆಗಸ್ಟ್ 5 ಮಂಗಳವಾರ ಸಂಭವಿಸಿದ ಮೇಘಸ್ಫೋಟ ಉದ್ಭವಿಸಿದ ಭಾರಿ ಪ್ರವಾಹದಿಂದಾಗಿ ಧರಾಲಿ ಗ್ರಾಮದ ಅರ್ಧದಷ್ಟು ಪ್ರದೇಶವೇ ನಾಶವಾಗಿ ಹೋಗಿದೆ. ನಾಲ್ವರು ಸಾವನ್ನಪ್ಪಿದ್ದು, ಇನ್ನೂ ಕನಿಷ್ಠ 60 ಮಂದಿ ಕಾಣೆಯಾಗಿರುವ ಕುರಿತು ಮಾಹಿತಿ ದೊರೆತಿದೆ. ಇಂದು ಭಾರತೀಯ ಸೇನೆ ಸೇರಿದಂತೆ ಇತರೆ ರಕ್ಷಣಾ ತಂಡಗಳು ಶೋಧ ಕಾರ್ಯಾಚರಣೆ ಪುನರಾರಂಭಿಸಿದ್ದು, ಅವಶೇಷಗಳ ನಡುವೆ ಸಿಲುಕಿಕೊಂಡವರಿಗೆ ಹುಡುಕಾಟ ನಡೆಸುತ್ತಿದ್ದಾರೆ.
ಸುರಕ್ಷಿತ ಸ್ಥಳಗಳಿಗೆ ಗಂಗಾ ನದಿ ಹುಟ್ಟುವ ಸ್ಥಳದಿಂದ ಗಂಗೋತ್ರಿಗೆ ತೆರಳುವ ಹಾದಿಯಲ್ಲಿ ಈ ಗ್ರಾಮ ಸಿಗುತ್ತದೆ. ಮೇಘಸ್ಫೋಟದ ನಂತರದ ಭಯಾನಕ ಪ್ರವಾಹದಲ್ಲಿ ಇದುವರೆಗೆ ನಾಲ್ವರು ಸಾವನ್ನಪ್ಪಿದ್ದು, ಸುಮಾರು 130 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರಾಖಂಡ
ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ಭಾರತೀಯ ಸೇನೆ ಎಂಐ-17 ಮತ್ತು ಚಿನೂಕ್ ಹೆಲಿಕಾಪ್ಟರ್ಗಳನ್ನು ಬಳಸಿದೆ.ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು ಮೇಘಸ್ಫೋಟ ಸಂಭವಿಸಿದ ಧರಾಲಿ ಗ್ರಾಮಕ್ಕೆ ಇಂದು ಭೇಟಿ ನೀಡಿದ್ದಾರೆ.
ಪ್ರವಾಹದಲ್ಲಿ ಕನಿಷ್ಠ 60 ಮಂದಿ ಕಾಣೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗುತ್ತಿದೆ. ಪ್ರಕೃತಿ ವಿಕೋಪ ಘಟಿಸಿದಾಗ ಧರಾಲಿ ಗ್ರಾಮದಲ್ಲಿ ಹರ್ ದೂದ್ ಜಾತ್ರೆ ನಡೆಯುತ್ತಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿ ಜನ ಸೇರಿದ್ದರು. ಹಾಗಾಗಿ, ಮೃತರ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ :ಹಾಸನ | ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೂಡಲೇ ಆರಂಭಿಸುವಂತೆ ಒತ್ತಾಯ
ಅಸಹಜ ಪರಿಸ್ಥಿತಿಗಳಲ್ಲಿ ಹವಾಮಾನ ವ್ಯವಸ್ಥೆಯಲ್ಲಿ ತಾಪಮಾನ ವ್ಯತ್ಯಾಸವಾಗುತ್ತದೆ. ಮೋಡಸ್ಫೋಟಕ್ಕೆ ಮುಂಚಿತವಾಗಿ ಬಿಸಿಯಾದ ತಾಪಮಾನ ಇರುತ್ತದೆ. ಬಿಸಿಯಾದ ಗಾಳಿ ಪರ್ವತಗಳ ಮೇಲ್ಭಾಗದಲ್ಲಿ ಚಲಿಸುತ್ತದೆ. ಈ ನಿರ್ವಾತವನ್ನು ತುಂಬಲು ತಂಪಾದ ಗಾಳಿಯು ಜಾಗವನ್ನು ಆಕ್ರಮಿಸುತ್ತದೆ. ಸಾಮಾನ್ಯವಾಗಿ 10-20 ಕಿ.ಮೀ. ತ್ರಿಜ್ಯದೊಳಗಿನ ಮೋಡಗಳ ಭಾರಿ ದ್ರವ್ಯರಾಶಿ ಪರ್ವತ ತಡೆಗೋಡೆಯಿಂದ ಸಿಕ್ಕಿಹಾಕಿಕೊಂಡ ನಂತರ ಮೇಘಸ್ಫೋಟಕ್ಕೆ ಸಾಂದ್ರೀಕರಿಸುತ್ತದೆ ಎಂದು ಜೋಶಿ ವಿವರಿಸಿದರು.
ಹವಾಮಾನ ವ್ಯವಸ್ಥೆಯಲ್ಲಿನ ತಾಪಮಾನ ವ್ಯತ್ಯಾಸದಿಂದ ದೊಡ್ಡ ಮೋಡಗಳ ಘನೀಕರಣದಿಂದ ಮೇಘಸ್ಫೋಟ ಉಂಟಾಗುತ್ತದೆ ಎಂದು ಹರಿದ್ವಾರದ ಗುರುಕುಲ ಕಾಂಗ್ರಿ ವಿಶ್ವವಿದ್ಯಾಲಯದ ಪರಿಸರ ವಿಜ್ಞಾನಗಳ ಮಾಜಿ ಪ್ರಾಧ್ಯಾಪಕ, ಮುಖ್ಯಸ್ಥ ಮತ್ತು ಡೀನ್ ಪ್ರೊ.ಬಿ.ಡಿ. ಜೋಶಿ ಹೇಳಿದ್ದಾರೆ. ಸಾಮಾನ್ಯ ಸಂದರ್ಭಗಳಲ್ಲಿ 3ರಿಂದ 4 ಕಿಲೋಮೀಟರ್ ತ್ರಿಜ್ಯದೊಳಗೆ ಮೋಡಗಳ ಘನೀಕರಣದಿಂದ ಜೋರು ಮಳೆಯಾಗುತ್ತದೆ ಎಂದು ಅವರು ತಿಳಿಸಿದರು.
ಇದನ್ನೂ ನೋಡಿ : ಡಾ. ಬಿ.ಆರ್. ಅಂಬೇಡ್ಕರ್ ವಿಶೇಷಾಂಕ : ಪಿಚ್ಚಳ್ಳಿ ಶ್ರೀನಿವಾಸ ಹಾಡಿರುವ ಕೇಳಿರಿ.
