ಪೇಯಿಂಗ್‌ ಗೆಸ್ಟ್‌ ಆಸ್ತಿ ತೆರಿಗೆಯನ್ನು ಪರಿಶೀಲಿಸಬೇಕು: ಕೆ.ಎನ್‌. ರಮೇಶ್‌

ಬೆಂಗಳೂರು: ಪೇಯಿಂಗ್‌ ಗೆಸ್ಟ್‌ನ (ಪಿಜಿ) ಎಲ್ಲ ಕಟ್ಟಡಗಳನ್ನು ಪಟ್ಟಿ ಮಾಡಲಿ, ಬೆಸ್ಕಾಂ ಸಂಪರ್ಕದ ಮಾಹಿತಿ, ಅಳತೆಯನುಸಾರ ಆಸ್ತಿ ತೆರಿಗೆಯನ್ನು ಪರಿಶೀಲಿಸಬೇಕು ಎಂದು ಬೆಂಗಳೂರು ದಕ್ಷಿಣ ನಗರ ಪಾಲಿಕೆ (ಬಿಎಸ್‌ಸಿಸಿ) ಆಯುಕ್ತ ಕೆ.ಎನ್‌. ರಮೇಶ್‌ ಸೆಪ್ಟೆಂಬರ್‌ 17ರಂದು ಸೂಚಿಸಿದರು.

ಎಸ್‌ಎಎಸ್‌ ಘೋಷಣೆಗಳನ್ನು ಪರಿಶೀಲಿಸಿ ತಪ್ಪಾಗಿರುವ ಪ್ರಕರಣಗಳಿಗೆ ಕಾಯ್ದೆ ಹಾಗೂ ನಿಯಮಗಳಂತೆ ಆಸ್ತಿತೆರಿಗೆ ಪರಿಷ್ಕರಿಸಲು ಹೇಳಿದರು.

ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆದಿರುವ ಕಟ್ಟಡಗಳ ಮಾಹಿತಿಯನ್ನು ನಗರ ಯೋಜನೆ ವಿಭಾಗದಿಂದ ಪಡೆದು, ಅವುಗಳನ್ನೆಲ್ಲ ಆಸ್ತಿ ತೆರಿಗೆ ಜಾಲಕ್ಕೆ ತರಬೇಕು. ಬಹುಮಹಡಿ ಕಟ್ಟಡಗಳ ಪಟ್ಟಿ ಮಾಡಿ, ‘ಟೋಟಲ್‌ ಸ್ಟೇಷನ್‌ ಸರ್ವೆ’ ಮೂಲಕ ವೈಜ್ಞಾನಿಕವಾಗಿ ಕಟ್ಟಡದ ಅಳತೆಯನ್ನು ಮಾಡಿ ವ್ಯತ್ಯಾಸ ಕಂಡುಬಂದ ಪ್ರಕರಣಗಳಲ್ಲಿ ಆಸ್ತಿತೆರಿಗೆ ಪರಿಷ್ಕರಿಸಲು ಸೂಚಿಸಿದರು.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡ ಕಾಡಿನಲ್ಲಿ ರಾಶಿ ರಾಶಿ ಮೂಳೆಗಳು ಪತ್ತೆ

ಗುಂಡಿಮುಕ್ತ ರಸ್ತೆ: ಪೂರ್ವ ನಗರ ಪಾಲಿಕೆ (ಬಿಇಸಿಸಿ) ವ್ಯಾಪ್ತಿಯ ರಸ್ತೆಗಳನ್ನು ಗುಂಡಿಮುಕ್ತವಾಗಿಸಲು ವಾರ್ಡ್‌ ಮಟ್ಟದ ಎಲ್ಲ ಎಂಜಿನಿಯರ್‌ಗಳು ಹೆಚ್ಚಿನ ಶ್ರಮ ವಹಿಸಬೇಕು ಎಂದು ಆಯುಕ್ತ ಡಿ.ಎಸ್. ರಮೇಶ್ ಹೇಳಿದರು.

ದೊಡ್ಡನೆಕ್ಕುಂದಿ ವ್ಯಾಪ್ತಿಯ ಎಇಸಿಎಸ್ ಬಡಾವಣೆಯಲ್ಲಿ ರಸ್ತೆ ಗುಂಡಿ ಮುಚ್ಚುವುದನ್ನು ಅವರು ಬುಧವಾರ ಪರಿಶೀಲಿಸಿದರು.

ಅಮಾನತು ಎಚ್ಚರಿಕೆ: ಸಿ.ವಿ. ರಾಮನ್‌ನಗರದಲ್ಲಿ ಹಾಳಾದ ಪಾದಚಾರಿ ರಸ್ತೆಗಳು, ರಸ್ತೆ ಗುಂಡಿಗಳ ದುರಸ್ತಿ ಮಾಡದಿರುವುದು, ಕಸ ಗುಡಿಸದಿರುವುದು, ತ್ಯಾಜ್ಯ ನಿರ್ವಹಣೆ ಸರಿಯಾಗಿ ಆಗದಿರುವುದನ್ನು ಗಮನಿಸಿದ ಬೆಂಗಳೂರು ಕೇಂದ್ರ ನಗರ ಪಾಲಿಕೆ (ಬಿಸಿಸಿಸಿ) ಆಯುಕ್ತ ರಾಜೇಂದ್ರ ಚೋಳನ್‌ ಅವರು, ಅಧಿಕಾರಿಗಳನ್ನು ಅಮಾನತು ಮಾಡುವುದಾಗಿ ಎಚ್ಚರಿಸಿದರು.

ಜೀವನ್ ಬಿಮಾ ನಗರ ಮುಖ್ಯರಸ್ತೆ ಬದಿ ಖಾಲಿ ನಿವೇಶನವಿದೆ. ಈ ಸ್ಥಳದಲ್ಲಿ ತ್ಯಾಜ್ಯ ತುಂಬಿದ್ದು, ಖಾಲಿ ನಿವೇಶನದಾರರಿಗೆ ನೋಟಿಸ್ ನೀಡಬೇಕು. ಪಾದಚಾರಿ ಮಾರ್ಗ ಹಾಗೂ ರಸ್ತೆಯನ್ನು ಒತ್ತುವರಿ ಮಾಡಿಕೊಂಡು ಶೆಡ್ ನಿರ್ಮಾಣ ಮಾಡಿದವರಿಗೆ ದಂಡ ವಿಧಿಸಬೇಕು ಎಂದರು.

ಇದನ್ನೂ ನೋಡಿ: ಸೌಹಾರ್ದ ವಾತಾವರಣ ನೆಲೆಸುವಲ್ಲಿ ಸಮುದಾಯದ ಕೊಡುಗೆ ಅಪಾರ – ಜಸ್ಟೀಸ್ ನಾಗಮೋಹನ್ ದಾಸ್ Janashakthi Media

Donate Janashakthi Media

Leave a Reply

Your email address will not be published. Required fields are marked *